Homeಮುಖಪುಟಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಡಾಖ್‌ಗೆ ರಾಜ್ಯ ಸ್ಥಾನಮಾನವನ್ನು ನೀಡಬೇಕು ಮತ್ತು ಬುಡಕಟ್ಟು ಪ್ರದೇಶಗಳನ್ನು ಸಂವಿಧಾನದ ಆರನೇ ಪರಿಚ್ಛೇದದಡಿ ಸೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ  ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ.

ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರಕಾರವು ಸ್ಪಂದಿಸದಿರುವುದಕ್ಕೆ ನಿರಾಶೆಯನ್ನು ವ್ಯಕ್ತಪಡಿಸಿದ್ದು, ತಾನು ದಣಿದಿರುವಂತೆ ಭಾಸವಾಗುತ್ತಿದೆ ಮತ್ತು ತನ್ನ ಶರೀರವು ನೋವನ್ನು ಅನುಭವಿಸುತ್ತಿದೆ, ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ ಕೇವಲ ನೀರು ಮತ್ತು ಉಪ್ಪು ಸೇವಿಸುವ ಮೂಲಕ ತಾನು ಬದುಕಿದ್ದೇನೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ಸಾಮಾನ್ಯ ನಾಗರಿಕರ ಕೃತಜ್ಞತೆಗಳು, ತಾನಿನ್ನೂ ನಂಬಿಕೆಯನ್ನು ಕಳೆದುಕೊಂಡಿಲ್ಲ. ಲಡಾಖ್‌ಗೆ ಇಂತಹ ಬೆಂಬಲವನ್ನು ನೀಡುತ್ತಿರುವ, ಸ್ವತಃ ಮಾಧ್ಯಮಗಳಾಗಿ ನಮ್ಮ ಮಾತುಗಳನ್ನು ದೇಶದ ಪ್ರತಿಯೊಬ್ಬ ಪ್ರಜೆಗೂ ತಲುಪಿಸುತ್ತಿರುವ ಎಲ್ಲ ಅಧಿಕಾರರಹಿತ ನಾಗರಿಕರಿಗೆ ಕೃತಜ್ಞತೆಗಳು. ಇದು ನಮ್ಮ ಪ್ರಧಾನಿ ಮತ್ತು ಗೃಹಸಚಿವರು ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೂ ತಲುಪುತ್ತದೆ ಎನ್ನುವ ನಂಬಿಕೆ ನನಗಿದೆ. ಅವರು ಶೀಘ್ರದಲ್ಲಿಯೇ ವಾಸ್ತವವನ್ನು ಅರ್ಥ ಮಾಡಿಕೊಳ್ಳುತ್ತಾರೆ ಮತ್ತು ನ್ಯಾಯವನ್ನು ನೀಡುತ್ತಾರೆ ಎಂಬ ನಂಬಿಕೆಯು ಈಗಲೂ ನನ್ನಲ್ಲಿದೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್ ನ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲು 3,000 ಜನರು ತನ್ನೊಂದಿಗೆ ಉಪವಾಸವನ್ನು ಮುಂದುವರಿಸಿದ್ದಾರೆ. ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳ ಪ್ರತ್ಯೇಕ ಲೋಕಸಭಾ ಸ್ಥಾನಗಳು, ವಿಶೇಷ ಭೂಮಿ ಮತ್ತು ಉದ್ಯೋಗ ಹಕ್ಕುಗಳು ಮತ್ತು ಲೋಕಸೇವಾ ಆಯೋಗದ ಸ್ಥಾಪನೆಯನ್ನೂ ಅವರು ಕೋರಿದ್ದಾರೆ. ಪ್ರಸ್ತುತ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನದಡಿ ಕೈಗಾರಿಕಾ ಶೋಷಣೆಯಿಂದಾಗಿ ಲಡಾಖ್‌ ಪರಿಸರ ವ್ಯವಸ್ಥೆ ಶಿಥಿಲಗೊಳ್ಳುವ ಬಗ್ಗೆಯೂ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಇಲ್ಲಿ ವಾಂಗ್ಚುಕ್ ಜೊತೆ ಸೇರಿಕೊಂಡ 5,000 ಜನರು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸಿದ್ದರು, ಈ ಪೈಕಿ 300 ಜನರು ಮೂರು ದಿನಗಳಿಂದ ಹತ್ತು ದಿನಗಳವರೆಗೆ ಉಪವಾಸವನ್ನು ಮುಂದುವರಿಸಲು ಸಂಕಲ್ಪ ಮಾಡಿದ್ದಾರೆ. ಜೊತೆಗೆ ದೇಶಾದ್ಯಂತ 40 ನಗರಗಳಲ್ಲಿ ಫ್ರೆಂಡ್ಸ್ ಆಫ್ ಲಡಾಖ್  ಕಾರ್ಯಕ್ರಮಗಳು ನಡೆದಿದೆ.

ವಾಂಗ್ಚುಕ್ ಅವರು 10,000 ಲಡಾಕಿ ಕುರುಬರು ಮತ್ತು ರೈತರ ಜೊತೆ ಗಡಿಯುದ್ದಕ್ಕೂ ಮೆರವಣಿಗೆಯನ್ನು ನಡೆಸುವುದಾಗಿ ಈ ಹಿಂದೆ ಹೇಳಿದ್ದರು, ಮೆರವಣಿಗೆ ಮೂಲಕ ನೆಲದ ವಾಸ್ತವತೆಯನ್ನು ತಿಳಿಸಲು ಬಯಸುವುದಾಗಿ ಹೇಳಿದ್ದರು.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...