Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...