Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...