Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....