Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...