Homeಕರ್ನಾಟಕಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

ಕಾರವಾರದ ಕಾಳಿ ನದಿ ದಂಡೆ ಮತ್ತು ಕಡಲ ತೀರದಲ್ಲಿ ಹಿಮಾಲಯದ ವಲಸೆ ಹಕ್ಕಿಗಳ ಹಾಡು

- Advertisement -
- Advertisement -

ಚಳಿಗಾಲದಲ್ಲಿ ವಲಸೆ ಬರುವ ದೂರದ ಹಿಮಾಲಯ ಮತ್ತು ಹಲವು ಕಡೆಯ ಹಕ್ಕಿಗಳ ಹಾಡು ಕಾರವಾರದ ಕಾಳಿ ನದಿಯ ಇಕ್ಕೆಲ ಮತ್ತು ಅರಬ್ಭೀ ಸಮುದ್ರದ ದಂಡೆಯಲ್ಲಿ ಕೇಳಿ ಬರಲಾರಂಭಿಸಿದ್ದು ಪಕ್ಷಿ ಪ್ರಿಯರನ್ನು ಖುಷಿ ಪಡಿಸುತ್ತಿದೆ. ನದಿಯ ಎರಡೂ ಕಡೆಯ ಜವುಗು, ಹುಲ್ಲುಗಾವಲು, ಅಳಿವೆ ಹಾಗೂ ಕಡಲಂಚಿಗೆ ಉತ್ತರ ಗೋಲಾರ್ಧದ ತುತ್ತತುದಿಯ ಹಿಮಚ್ಛಾದಿತ ಪ್ರದೇಶದಿಂದ ವಲಸೆ ಬಂದಿರುವ ವಿವಿಧ ಬಗೆಯ ಹಕ್ಕಿಗಳು ಮತ್ತವುಗಳ ಚಲನವಲನಗಳನ್ನು ಕೈಗಾ ಬರ್ಡರ್ಸ್ ತಂಡ ಸೆರೆಹಿಡಿದಿದೆ.

ಕೋವಿಡ್ ಹಾವಳಿಯಿಂದಾಗಿ ಕಳೆದೆರಡು ವರ್ಷದಿಂದ ಕ್ಷೇತ್ರ ಕಾರ್ಯ ಮಾಡಲಾಗದ ಬೇಸರದಲ್ಲಿದ್ದ ಕೈಗಾ ಬರ್ಡರ್ಸ್ ತಂಡವೀಗ ವಲಸೆ ಹಕ್ಕಿಗಳ ಕಲರವ, ಹಾರಾಟ, ಸಂತಾನೋತ್ಪತ್ತಿಯೇ ಮುಂತಾದ ಚಟುವಟಿಕೆಗಳ ದಾಖಲೆಯಲ್ಲಿ ತೊಡಗಿದೆ. ಶಕ್ತಿ ಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳ ಅವೈಜ್ಞಾನಿಕ ಬಳಕೆಯಿಂದ ಭೂಮಂಡಲದ ತಾಪಮಾನ ಏರುಗತಿಯಲ್ಲಿರುವ ಈ ವಿಷಮ ಕಾಲಘಟ್ಟದಲ್ಲಿ ಋತು ಮಾನಗಳ ಬದಲಾವಣೆಯ ಬಹುಮೂಲ್ಯವಾದ ಸೂಚಕಗಳಾದ ಪಕ್ಷಿಗಳ ಸಂರಕ್ಷಣೆಯ ಅರಿವು ಜನರಲ್ಲಿ ಮೂಡಬೇಕಾದ ಅನಿವಾರ್ಯತೆ ಎದುರಾಗಿದೆಯೆಂದು ತಂಡದ ಹಿರಿಯ ಪಕ್ಷಿ ತಜ್ಞ ಜಲೀಲ್ ಬಾರ್ಗಿರ್ ಹೇಳುತ್ತಾರೆ.

ಉತ್ತರ ಯುರೋಪ್, ಸೈಬಿರಿಯಾ, ಫಿನ್ಲ್ಯಾಂಡ್, ಮೆಡಿಟೆರಿಯನ್ ಸಮುದ್ರ, ಲಡಾಕ್, ಟಿಬೆಟ್‌ಗಳಿಂದ ಸಾವಿರಾರು ಕಿಮೀ ದೂರದ ಕಾರವಾರ ನದಿ-ಕಡಲು ದಂಡೆಗೆ ಹಾರಿ ಬಂದಿರುವ ಪಕ್ಷಿಗಳ ಅಪರೂಪದ ಚಿತ್ರ ಕೈಗಾ ಬರ್ಡರ್ಸ್ ಬಳಗ ತೆಗೆದಿದೆ. ಕಿತ್ತಳೆ ಕಾಲಿನ ಕಡಲಹಕ್ಕಿ [RUDDY TURNSTONE], ನೀಲಕತ್ತಿನ ಉಲ್ಲಂಕಿ [Ruff], ಕಡಲ ಉಲ್ಲಂಕಿ [Great Knot], ಬೂದು ಬೆನ್ನಿನ ಕಡಲಕ್ಕಿ [Heuglin’s Gull], ಕೆಂಪು ಕಾಲಿನ ಚಾಣ [Amur Falcon], ಪಟ್ಟೆರೆಕ್ಕೆಯ ಸೆಳೆವ [Montagu’s Harrier], ಪಟ್ಟೆತಲೆ ಹೆಬ್ಬಾತು [Bar Headed Geese] ಮತ್ತು ಬಿಳಿಕತ್ತಿನ ಉಲಿಯಕ್ಕಿ [Lesser Whltethroat] ಕಾರವಾರದ ಸುತ್ತಮುತ್ತ ಕಂಡುಬಂದಿವೆ. ಉತ್ತರ ಗೋಲಾರ್ಧದ ಹಿಮಾವೃತ ಪ್ರದೇಶಗಳ ಅತ್ಯುಗ್ರ ಛಳಿಗಾಲ ತಾಳಲಾಗದೆ ಸ್ವಲ್ಪ ಬೆಚ್ಚಗಿರವ ದಕ್ಷಿಣದತ್ತ ಹಕ್ಕಿಗಳು ವಲಸೆ ಬರುವುದು ಸಾಮಾನ್ಯ.

ಹಿಮ ಪ್ರದೇಶದ ಹಕ್ಕಿಗಳ ಜತೆ ಸ್ಥಳೀಯ ಅಳಿವಿನಂಚಿನ ವಲಸಿಗ ಬಿಳಿ ರಣ ಹದ್ದು [Egyptian Vulture] ಹಾಗೂ ಹಿಮಾಲಯದ ದೊಡ್ಡ ರಣ ಹದ್ದು [Himalayan Griffon Vulture] ಸಹ ಕಂಡುಬಂದಿದೆಯೆಂದು ಕೈಗಾ ಬರ್ಡ್‌ರ್ಸ್ ಬಳಗದವರು ಹೇಳುತ್ತಾರೆ. ಬಿಳಿರಣಹದ್ದು ತರುಣಾವಸ್ಥೆಯಲ್ಲಿ ಕಂಡುಬಂದಿರುವುದು ಅವುಗಳ ಸಂತಾನ ಹತ್ತಿರದಲ್ಲೆ ಆಗಿರುವುದನ್ನು ದೃಢಪಡಿಸುವಂತಿದೆ. ಸತ್ತ ಜಾನುವಾರುಗಳ ಕಳೆಬರದ [ಆಹಾರದ] ಕೊರತೆ, ಪಶುವೈದ್ಯಕೀಯದಲ್ಲಿ ನಿಷೇದಿತ ಔಷಧಿಗಳ ಮಿತಿಮಿಮೀರಿದ ಬಳಕೆ ಮತ್ತು ವಾಸಸ್ಥಳಗಳ ಒತ್ತುವರಿಯಿಂದ ಅಳಿವಿನಂಚಿನಲ್ಲಿರುವ ಬಿಳಿ ರಣಹದ್ದು, ಹಿಮಾಲಯದ ಬೃಹತ್ ಹದ್ದು ಮತ್ತು ಕಡಲ ಉಲ್ಲಂಕಿ ಪ್ರಬೇಧಗಳು ಕಾರವಾರದ ಆಚೀಚೆ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

ಅಪಾಯದಂಚಿನಲ್ಲಿರುವ ರಣ ಹದ್ದುಗಳ ಸಂರಕ್ಷಣೆಗೆ ಜಿಲ್ಲಾಡಳಿತ, ಅರಣ್ಯ ಇಲಾಖೆ ಮತ್ತು ಪಶುಸಂದೋಪನಾ ಇಲಾಖೆಗಳು ಒಂದಾಗಿ ಪ್ರಯತ್ನ ನಡೆಸಬೇಕೆಂದು ಕೈಗಾ ಬರ್ಡರ್ಸ್ ತಂಡದ ಸಂಯೋಜಕ ಮೋಹನದಾಸ್ ಸರ್ಕಾರಕ್ಕೆ ಪತ್ರ ಬರೆದು ಮನವಿಮಾಡಿದ್ದಾರೆ.


ಇದನ್ನೂ ಓದಿ: ಆಹಾರ ಶ್ರೇಷ್ಠತೆಯ ರಾಜಕೀಯದ ವಿವಿಧ ಮುಖಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...