Homeಅಂಕಣಗಳುಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

- Advertisement -
- Advertisement -

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ
“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ. ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...