Homeಅಂಕಣಗಳುಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

- Advertisement -
- Advertisement -

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ
“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ. ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...