Homeಅಂಕಣಗಳುಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

- Advertisement -
- Advertisement -

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ
“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ. ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....