Homeಅಂಕಣಗಳುಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು...

ಮೋದಿಯ ಕೀಳು ಟೀಕೆಗೆ ಗುರಿಯಾದ ಸೋನಿಯಾರ ಬಗ್ಗೆ ಲಂಕೇಶರು ಹೀಗಂದಿದ್ದರು…

- Advertisement -
- Advertisement -

ಸೋನಿಯಾ ಎಂಬ ಸ್ತ್ರೀ ಕಾರಂಜಿ
“ಘಜ್ನಿ ಮಹಮದ್, ತೈಮೂರ್‍ನ ಅನುಯಾಯಿಗಳು ಗಾಂಧೀಜಿಯನ್ನು ಕೊಂದದ್ದು, ಈ ನಾಡಿನ ಮುಸ್ಲಿಂ ಜನಾಂಗದ ದೇವಸ್ಥಾನವನ್ನು ಒಡೆದು ಬೀಳಿಸಿದ್ದು, ಮುಂಬೈನಂಥ ನಗರದಲ್ಲಿ ಅಮಾಯಕ ಅಲ್ಪಸಂಖ್ಯಾತರನ್ನು ಸುತ್ತುವರಿದು ಹಿಂಸಿಸಿ, ಅಂಗಡಿಗಳನ್ನು ಲೂಟಿ ಮಾಡಿದ್ದು ಇವತ್ತು ಐತಿಹಾಸಿಕ ದಾಖಲೆಯಾಗಿದೆ; ಗಲ್ಲಿಗೇರಬೇಕಾದ, ಜೈಲಲ್ಲಿ ಕೊಳೆಯುತ್ತಿರಬೇಕಾದ ಇಂಥವರು ಇವತ್ತು ಈ ರಾಷ್ಟ್ರದ ಆಡಳಿತ ಸೂತ್ರಗಳನ್ನು ಹಿಡಿದುಕೊಳ್ಳುವ ಮಾತಾಡುತ್ತಿರುವುದು ಭಾರತ ತಲುಪಿರುವ ಕರುಣಾಜನಕ ಸ್ಥಿತಿಯನ್ನು ತೋರುತ್ತದೆ. ಕೇಡಿಗಳನ್ನು ಹಿಡಿದು ಶಿಕ್ಷಿಸುವ ಬದಲು ಅವರು ದಿಗ್ವಿಜಯ ಸಾಧಿಸಿದಂತೆ ಆರತಿ ಬೆಳಗುತ್ತಿರುವುದು ವಿಚಿತ್ರವಾಗಿದೆ. ಯಾರೂ ಯಾವ ದೇಶವನ್ನು ನೋಡಕೂಡದು, ಕೋಶವನ್ನು ಓದಕೂಡದು, ಮೌಢ್ಯದಿಂದ ಹೊರಬರಕೂಡದು ಎಂದು ಇವತ್ತಿಗೂ ಹೇಳುತ್ತಿರುವ ಈ ಸಮಾಜದ್ರೋಹಿ, ಜೀವದ್ರೋಹಿಗಳು ಸಾವಿರಾರು ವರ್ಷಗಳಿಂದ ಈ ದೇಶವನ್ನು ಜಾತಿಪದ್ಧತಿಯಲ್ಲಿ ಹೂತುಹಾಕಿದ್ದು ಕಣ್ಣಿದ್ದು ನೋಡಬಲ್ಲವರಿಗೆ ಗೊತ್ತಿದೆ. ಇಂಥ ವಂಚಕರು ಸೋನಿಯಾ ತರಹದ ಮಹಿಳೆಯನ್ನು ವಿದೇಶದವಳೆಂದು ಹೀಯಾಳಿಸುವುದು ಇವರ ಪರಂಪರೆಗೆ ತಕ್ಕಂತಿದೆ.”
“ಈ ದೇಶದಲ್ಲಿಯೇ ಇದ್ದು ಇಲ್ಲಿಯ ಜನಸಮುದಾಯದ ದುರಂತ, ಸೋಲು, ಸಾವು ಎಲ್ಲವನ್ನೂ ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡ, ಇಲ್ಲಿಯ ಜನರ ಅಸಹಾಯಕ ಸ್ಥಿತಿಯನ್ನೇ ತಮ್ಮ ಏಳ್ಗೆಗೆ ಉಪಯೋಗಿಸಿಕೊಂಡ ಪೂರ್ಣಯ್ಯಗಳೆಂಬ ದುಷ್ಟರು ನಿಜವಾಗಿಯೂ ಪರದೇಶಿಗಳು; ಇಲ್ಲಿಯ ಒಬ್ಬ ವಿಮಾನ ಚಾಲಕನನ್ನು ವರಿಸಿ ಆತನನ್ನು ರಾಜಕೀಯದಿಂದ ಹೊರಗಿಡಲು ಯತ್ನಿಸಿ ವಿಫಲವಾಗಿ ಸಾವು, ನೋವು, ದುಃಖದಲ್ಲಿ ಬೆಂದು ಹೋಗಿ ಇವತ್ತು ಗಾಂಧೀಜಿಯ ಮಾನವೀಯತೆಯನ್ನು ಸಾರ್ವಜನಿಕ ಜೀವನಕ್ಕೆ ತರಲು ಯತ್ನಿಸುತ್ತಿರುವ ಸೋನಿಯಾ ಈ ನಾಡಿನ ಸೊಸೆ, ಇಲ್ಲಿಯ ಹೆಮ್ಮೆಯ ಹೆಣ್ಣುಮಗಳು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಈ ಸೋನಿಯಾ ಅತ್ತೆ ಇಂದಿರಾಗಿಂತ, ಪತಿ ರಾಜೀವ್‍ಗಿಂತ ಜಾಣೆ; ಅವರಿಬ್ಬರೂ ಕೆಟ್ಟದಾಗಿ ಅರಚಬಹುದಾಗಿದ್ದ ಸಂದರ್ಭದಲ್ಲಿ ಪಶ್ಚಿಮದ ಖಚಿತತೆ, ಕುಶಲತೆ, ತೀವ್ರತೆ ತೋರುತ್ತಿರುವ ಸೋನಿಯಾ ನಿಜವಾದ ನಾಯಕಿಯಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಈಕೆ ಕೇವಲ ಹತ್ತು ದಿನದಲ್ಲಿ ಭಾರತದ ರಾಜಕೀಯಕ್ಕೆ ಮಿಂಚಿನ ಸಂಚಾರ ಮೂಡಿಸಿರುವುದು ಬಿಜೆಪಿಗಳಿಗೆ ದುಃಸ್ವಪ್ನವಾಗಿ ಪರಿಣಮಿಸಿದೆ.”
ಫೆಬ್ರವರಿ 11, 1998

ಪರಕೀಯ ವಾಜಪೇಯಿ ನಮ್ಮ ಹೆಣ್ಣುಮಗಳು ಸೋನಿಯಾ
“ಮಾಸ್ತಿಯವರು ತುಂಬ ಸುಶಿಕ್ಷಿತರಾಗಿದ್ದರು. ಆದರೆ ಅವರಿಗೆ ಭಾರತೀಯ ಸಮಾಜದಲ್ಲಿರುವ ಅನ್ಯಾಯಗಳು, ಶೋಷಣೆ, ಜಾತಿಪದ್ಧತಿ, ಪ್ರಚ್ಛನ್ನ ದಬ್ಬಾಳಿಕೆ- ಯಾವುದೂ ಕಾಣಿಸುತ್ತಿರಲಿಲ್ಲ. ಹಾಗೆಯೇ ಬ್ರಾಹ್ಮಣೇತರರ ಮೌಢ್ಯದ ಸೂಕ್ಷ್ಮಗಳು, ಅಪಾಯಗಳೂ ತಿಳಿಯುತ್ತಿರಲಿಲ್ಲ. ಅವರ ಪ್ರಕಾರ ವಸ್ತುನಿಷ್ಠೆ ಯಾವುದೆಂದರೆ, ಈಗಿರುವ ವ್ಯವಸ್ಥೆಯನ್ನು ಕಿಂಚಿತ್ತೂ ಕೆಡದಂತೆ ಕಾಪಾಡಿಕೊಂಡು ಬರುವುದು. ಮಾಸ್ತಿಯವರ ವಸ್ತುನಿಷ್ಠೆಯ ಸಿದ್ಧಾಂತವನ್ನು ಒಪ್ಪಿಕೊಂಡರೆ ಮಾತ್ರ ಅವರು ಭಗವದ್ಗೀತೆಗೆ ನೀಡುವ ಅರ್ಥವನ್ನು ಒಪ್ಪಬಹುದು. ಅವರ ಪ್ರಕಾರ ಧರ್ಮ, ಸ್ವಧರ್ಮ, ಆತ್ಮ, ಪರಮಾತ್ಮ ಮುಂತಾದವೆಲ್ಲ ಎಂದೂ ಬದಲಾಗದ ವಸ್ತುಗಳು; ಧರ್ಮ ಜಾತಿಯಾಗಿಯೂ ವರ್ಗವಾಗಿಯೂ ಧರ್ಮವಾಗಿಯೂ ಬರುತ್ತದೆ. ಹಾಗಾಗಿಯೇ ಇಲ್ಲಿ ಕಂದಾಚಾರಿಯೊಬ್ಬನನ್ನು ಧರ್ಮವಂತ ಎಂದು ಕರೆಯುವುದು ಸುಲಭವಾಗುತ್ತದೆ. ಹಾಗೆಯೇ ಸೋನಿಯಾ ಇಟಾಲಿಯನ್ ಹೆಣ್ಣುಮಗಳು ಎಂಬ ಕಾರಣಕ್ಕೆ ನಮ್ಮ ಧರ್ಮಕ್ಕೆ ಸೇರಿದವಳಲ್ಲ, ನಮ್ಮ ಜೀವನಕ್ರಮದಿಂದ ಬಂದವಳಲ್ಲ ಎಂದು ವಾದಿಸುವುದು ಸುಲಭವಾಗುತ್ತದೆ. ಇದು ಶೋಷಕರ ಮಾರ್ಗ, ಸುಳ್ಳರ ದಾರಿ. ಯಾರೂ ಸಮುದ್ರವನ್ನು ದಾಟಿ ಹೊರದೇಶಗಳಿಗೆ ಹೋಗದಿದ್ದರೆ, ಯಾರೂ ಹೊರದೇಶದಿಂದ ಇಲ್ಲಿಗೆ ಬರದಿದ್ದರೆ ಇಲ್ಲಿ ತಾಳೆಗರಿಯ ಮೂಲಕ ವಂಚಿಸುತ್ತಾ ಹೋಗಬಹುದು. ಈ ಪರಕೀಯ ಎಂಬ ಮಾತನ್ನೇ ತೆಗೆದುಕೋ. ನನ್ನ ಪ್ರಕಾರ ಇಲ್ಲಿಯ ಪ್ರಕೃತಿ, ಜನ, ಸಂಪತ್ತು, ಆತ್ಮಗೌರವ ಇವೆಲ್ಲವುಗಳ ಬಗ್ಗೆ ಯಾವುದೇ ಪ್ರೀತಿ, ಗೌರವ ಇಲ್ಲದವನು ಪರಕೀಯ. ಇಂಥ ಪರಕೀಯತೆಗೆ ಉದಾಹರಣೆಯಾಗಿ ನಾನು ದಿವಾನ್ ಪೂರ್ಣಯ್ಯನವರ ಬಗ್ಗೆ ಹೇಳುತ್ತಿರುತ್ತೇನೆ. ಮೈಸೂರು ರಾಜ್ಯದ ಸೋಲು, ಟಿಪ್ಪುವಿನ ಸಾವು, ಇಂಗ್ಲಿಷರ ದಬ್ಬಾಳಿಕೆ ಎಲ್ಲವೂ ಈ ದೇಶದ ಚೈತನ್ಯವನ್ನು ಮುರಿಯುತ್ತಿದ್ದಾಗ ಪೂರ್ಣಯ್ಯನವರು ದಿವಾನ ಸ್ಥಾನದಲ್ಲಿ ನೆಮ್ಮದಿಯಾಗಿದ್ದರು; ಆದರೆ ಫ್ರೆಂಚರ ದೂಬಾಯಿ ಪಾದ್ರಿ ಸಾವಿರಾರು ಜನರಿಗೆ ನೆರವಾದ; ಸಿಡುಬು ಬಂದಾಗ ಲಸಿಕೆ ಹಾಕಿಸಿ ಜೀವ ಉಳಿಸಿದ. ಇಲ್ಲಿಯ ಅನಕ್ಷರತೆ, ಅಸಹಾಯಕತೆಯನ್ನು ತಮ್ಮ ವೈಭವಕ್ಕಾಗಿ ಬಳಸಿಕೊಂಡ ಪೂರ್ಣಯ್ಯ ಈ ದೇಶದವರು, ಇಲ್ಲಿಯ ಜನರನ್ನು ಪ್ರೀತಿಸಿ ಪೊರೆದ ದೂಬಾಯಿ ಪಾದ್ರಿ ಪರಕೀಯ ಎಂದು ನಾನು ನಂಬುವುದಿಲ್ಲ. ಆದ್ದರಿಂದಲೇ ನನ್ನ ದೃಷ್ಟಿಯಲ್ಲಿ ಪೂರ್ಣಯ್ಯ ಪರಕೀಯ, ವಿಶ್ವೇಶ್ವರಯ್ಯ ಸ್ವಕೀಯ, ಅನ್ಯಜಾತಿಯ ದೇವಾಲಯ ಬೀಳಿಸುವ ಅಡ್ವಾಣಿ, ವಾಜಪೇಯಿಗಳು ಪರಕೀಯ, ಸೋನಿಯಾ ಈ ದೇಶದ ಹೆಣ್ಣುಮಗಳು. ನಮ್ಮ ಜನಕ್ಕೆ ಎಲ್ಲ ದೇಶಗಳಿಂದ, ಎಲ್ಲ ಬಗೆಯ ಜನರಿಂದ ಆರ್ಥಿಕ ನೆರವು, ಬೆಚ್ಚನೆಯ ಪ್ರೀತಿ, ವೈಜ್ಞಾನಿಕ ದೃಷ್ಟಿ, ಆಧುನಿಕ ಧೋರಣೆ ಬೇಕಾಗಿದೆ.”
ಮಾರ್ಚ್ 4, 1998

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...