Homeಮುಖಪುಟಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್‌‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಭಾರೀ ಸೋಲನ್ನು ಅನುಭವಿಸಿದ ಐದು ರಾಜ್ಯಗಳ ತಮ್ಮ ಪಕ್ಷದ ಮುಖ್ಯಸ್ಥರನ್ನು ಮಂಗಳವಾರ ವಜಾಗೊಳಿಸಿದ್ದಾರೆ. ಇದು ಪಕ್ಷದ ‘ಮರುಸಂಘಟನೆ’ಯ ಮೊದಲ ಹೆಜ್ಜೆ ಎಂದು ಕರೆಯಲಾಗಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಎಂಟು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಕೂಡಾ ರಾಜೀನಾಮೆ ಕೇಳಿದ ನಾಯಕರಲ್ಲಿ ಸೇರಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ ‘ಪುನರ್‌ ಸಂಘಟನೆಗೆ ಅನುಕೂಲವಾಗುವಂತೆ’ ರಾಜೀನಾಮೆಗಳನ್ನು ಕೇಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌‌‌ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆ‌ಸ್‌‌ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಸೋತಿದೆ. ಇತರ ನಾಲ್ಕು ರಾಜ್ಯಗಳಲ್ಲಿ ಪ್ರಭಲ ಸ್ಪರ್ಧೆ ನೀಡಲು ಪಕ್ಷವು ವಿಫಲಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀರಾ ಹೀನಾಯವಾಗಿ ಸೋಲುಂಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಅಮರಿಂದರ್ ಸಿಂಗ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಘರ್ಷಣೆ ಮಾಡಿದ್ದರಿಂದ ಕಾಂಗ್ರೆಸ್ ಆಂತರಿಕವಾಗಿ ಕುಸಿಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯಗಳಲ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಭಾನುವಾರ ನಡೆದ ಕಾಂಗ್ರೆಸ್ ನಾಯಕತ್ವದ ಸಭೆಯ ನಂತರ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪಕ್ಷದ ನಾಯಕರು ಹೇಳುವಂತೆ, ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು ‘ಪಕ್ಷದ ಹಿತಾಸಕ್ತಿಗಾಗಿ ತ್ಯಾಗ’ ಎಂದು ಪ್ರಸ್ತುತಪಡಿಸಿದರು. ಆದರೆ ಅದನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು, ಆದರೆ ನಾವೆಲ್ಲರೂ ಇದನ್ನು ತಿರಸ್ಕರಿಸಿದ್ದೇವೆ” ಎಂದು ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿಲ್ಲ.

ನಾಲ್ಕೂವರೆ ಗಂಟೆಗಳ ಸಭೆಯ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ‘ಪರಿಣಾಮಕಾರಿ ಮತ್ತು ತಕ್ಷಣದ ಕ್ರಮಗಳನ್ನು’ ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದೆ.

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ತನ್ನ ಎಲ್ಲಾ ಮಾಜಿ ನಾಯಕರ ವೀಡಿಯೊವನ್ನು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಪಕ್ಷದಲ್ಲಿ ಗಾಂಧಿ ಕುಟುಂಬವು ಅಧಿಕಾರದಲ್ಲಿ ಉಳಿಯುತ್ತದೆ ಎಂದು ಸೂಚಿಸುತ್ತದೆ.

ಕಾಂಗ್ರೆಸ್ “ಭಿನ್ನಮತೀಯರು” ಅಥವಾ G-23 ನಾಯಕರ ಗುಂಪು ಸೋನಿಯಾ ಗಾಂಧಿಯವರಿಗೆ ವ್ಯಾಪಕವಾದ ಸಾಂಸ್ಥಿಕ ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ಜಿ -23 ರ ಪ್ರಮುಖ ಸದಸ್ಯರಾದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಗಾಂಧಿಗಳು ಪಕ್ಕಕ್ಕೆ ಸರಿದು, ಪಕ್ಷವನ್ನು ಮುನ್ನಡೆಸಲು ಬೇರೆ ನಾಯಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಲೆ ಉತ್ತಮ ನಾಯಕತ್ವ ಇಲ್ಲದೆ ಕೆಳಗಿನ ನಾಯಕತ್ವ ಬೆಳೆಯದು. ದೇಶ ಇಂದು ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಹೊರಬರಲು, ದೂರಗಾಮಿ ನೋಟ, ಗುರಿ ಮತ್ತು ಅದನ್ನು ಜನಮನದಲ್ಲಿ ಸ್ಥಾಪಿಸಿ ಹೋರಾಟದ ಕಿಚ್ಚು ಹಚ್ಚುವಲ್ಲಿ ಕಾಂಗ್ರೆಸ್ ನಾಯಕತ್ವ ಸೋತಿದೆ ಒಮ್ಮೆ ಅಲ್ಲ, ಅನೇಕ ಬಾರಿ! ಆದ್ದರಿಂದ, ಕಾಂಗ್ರೆಸ್ ಪರ್ಯಾಯ ರಾಜಕಾರಣದ ಶಕ್ತಿಯಾಗಿ ಏಳಲು ಮೊದಲು, ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೆರೆದ ಮನಸ್ಸಿನಿಂದ ಯೋಚಿಸಿ, ಕೆಳಗಿಳಿದು, ಹುಮ್ಮನಸ್ಸಿನಿಂದ ಪಕ್ಷ ಕಟ್ಟುವ ನಾಯಕತ್ವವನ್ನು ರೂಪಿಸಲು ಅನುವು ಮಾಡಿಕೊಡಬೇಕು. ಕಾಂಗ್ರೆಸ್ ನ ಮತ್ತು ಮುಖ್ಯವಾಗಿ, ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂಬುದು ನನ್ನ ನಮ್ರ ಅನಿಸಿಕೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...