Homeಮುಖಪುಟಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್‌‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಭಾರೀ ಸೋಲನ್ನು ಅನುಭವಿಸಿದ ಐದು ರಾಜ್ಯಗಳ ತಮ್ಮ ಪಕ್ಷದ ಮುಖ್ಯಸ್ಥರನ್ನು ಮಂಗಳವಾರ ವಜಾಗೊಳಿಸಿದ್ದಾರೆ. ಇದು ಪಕ್ಷದ ‘ಮರುಸಂಘಟನೆ’ಯ ಮೊದಲ ಹೆಜ್ಜೆ ಎಂದು ಕರೆಯಲಾಗಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಎಂಟು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಕೂಡಾ ರಾಜೀನಾಮೆ ಕೇಳಿದ ನಾಯಕರಲ್ಲಿ ಸೇರಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ ‘ಪುನರ್‌ ಸಂಘಟನೆಗೆ ಅನುಕೂಲವಾಗುವಂತೆ’ ರಾಜೀನಾಮೆಗಳನ್ನು ಕೇಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌‌‌ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆ‌ಸ್‌‌ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಸೋತಿದೆ. ಇತರ ನಾಲ್ಕು ರಾಜ್ಯಗಳಲ್ಲಿ ಪ್ರಭಲ ಸ್ಪರ್ಧೆ ನೀಡಲು ಪಕ್ಷವು ವಿಫಲಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀರಾ ಹೀನಾಯವಾಗಿ ಸೋಲುಂಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಅಮರಿಂದರ್ ಸಿಂಗ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಘರ್ಷಣೆ ಮಾಡಿದ್ದರಿಂದ ಕಾಂಗ್ರೆಸ್ ಆಂತರಿಕವಾಗಿ ಕುಸಿಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯಗಳಲ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಭಾನುವಾರ ನಡೆದ ಕಾಂಗ್ರೆಸ್ ನಾಯಕತ್ವದ ಸಭೆಯ ನಂತರ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪಕ್ಷದ ನಾಯಕರು ಹೇಳುವಂತೆ, ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು ‘ಪಕ್ಷದ ಹಿತಾಸಕ್ತಿಗಾಗಿ ತ್ಯಾಗ’ ಎಂದು ಪ್ರಸ್ತುತಪಡಿಸಿದರು. ಆದರೆ ಅದನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು, ಆದರೆ ನಾವೆಲ್ಲರೂ ಇದನ್ನು ತಿರಸ್ಕರಿಸಿದ್ದೇವೆ” ಎಂದು ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿಲ್ಲ.

ನಾಲ್ಕೂವರೆ ಗಂಟೆಗಳ ಸಭೆಯ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ‘ಪರಿಣಾಮಕಾರಿ ಮತ್ತು ತಕ್ಷಣದ ಕ್ರಮಗಳನ್ನು’ ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದೆ.

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ತನ್ನ ಎಲ್ಲಾ ಮಾಜಿ ನಾಯಕರ ವೀಡಿಯೊವನ್ನು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಪಕ್ಷದಲ್ಲಿ ಗಾಂಧಿ ಕುಟುಂಬವು ಅಧಿಕಾರದಲ್ಲಿ ಉಳಿಯುತ್ತದೆ ಎಂದು ಸೂಚಿಸುತ್ತದೆ.

ಕಾಂಗ್ರೆಸ್ “ಭಿನ್ನಮತೀಯರು” ಅಥವಾ G-23 ನಾಯಕರ ಗುಂಪು ಸೋನಿಯಾ ಗಾಂಧಿಯವರಿಗೆ ವ್ಯಾಪಕವಾದ ಸಾಂಸ್ಥಿಕ ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ಜಿ -23 ರ ಪ್ರಮುಖ ಸದಸ್ಯರಾದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಗಾಂಧಿಗಳು ಪಕ್ಕಕ್ಕೆ ಸರಿದು, ಪಕ್ಷವನ್ನು ಮುನ್ನಡೆಸಲು ಬೇರೆ ನಾಯಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಲೆ ಉತ್ತಮ ನಾಯಕತ್ವ ಇಲ್ಲದೆ ಕೆಳಗಿನ ನಾಯಕತ್ವ ಬೆಳೆಯದು. ದೇಶ ಇಂದು ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಹೊರಬರಲು, ದೂರಗಾಮಿ ನೋಟ, ಗುರಿ ಮತ್ತು ಅದನ್ನು ಜನಮನದಲ್ಲಿ ಸ್ಥಾಪಿಸಿ ಹೋರಾಟದ ಕಿಚ್ಚು ಹಚ್ಚುವಲ್ಲಿ ಕಾಂಗ್ರೆಸ್ ನಾಯಕತ್ವ ಸೋತಿದೆ ಒಮ್ಮೆ ಅಲ್ಲ, ಅನೇಕ ಬಾರಿ! ಆದ್ದರಿಂದ, ಕಾಂಗ್ರೆಸ್ ಪರ್ಯಾಯ ರಾಜಕಾರಣದ ಶಕ್ತಿಯಾಗಿ ಏಳಲು ಮೊದಲು, ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೆರೆದ ಮನಸ್ಸಿನಿಂದ ಯೋಚಿಸಿ, ಕೆಳಗಿಳಿದು, ಹುಮ್ಮನಸ್ಸಿನಿಂದ ಪಕ್ಷ ಕಟ್ಟುವ ನಾಯಕತ್ವವನ್ನು ರೂಪಿಸಲು ಅನುವು ಮಾಡಿಕೊಡಬೇಕು. ಕಾಂಗ್ರೆಸ್ ನ ಮತ್ತು ಮುಖ್ಯವಾಗಿ, ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂಬುದು ನನ್ನ ನಮ್ರ ಅನಿಸಿಕೆ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...