Homeಮುಖಪುಟಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್‌‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಭಾರೀ ಸೋಲನ್ನು ಅನುಭವಿಸಿದ ಐದು ರಾಜ್ಯಗಳ ತಮ್ಮ ಪಕ್ಷದ ಮುಖ್ಯಸ್ಥರನ್ನು ಮಂಗಳವಾರ ವಜಾಗೊಳಿಸಿದ್ದಾರೆ. ಇದು ಪಕ್ಷದ ‘ಮರುಸಂಘಟನೆ’ಯ ಮೊದಲ ಹೆಜ್ಜೆ ಎಂದು ಕರೆಯಲಾಗಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಎಂಟು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಕೂಡಾ ರಾಜೀನಾಮೆ ಕೇಳಿದ ನಾಯಕರಲ್ಲಿ ಸೇರಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ ‘ಪುನರ್‌ ಸಂಘಟನೆಗೆ ಅನುಕೂಲವಾಗುವಂತೆ’ ರಾಜೀನಾಮೆಗಳನ್ನು ಕೇಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌‌‌ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆ‌ಸ್‌‌ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಸೋತಿದೆ. ಇತರ ನಾಲ್ಕು ರಾಜ್ಯಗಳಲ್ಲಿ ಪ್ರಭಲ ಸ್ಪರ್ಧೆ ನೀಡಲು ಪಕ್ಷವು ವಿಫಲಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀರಾ ಹೀನಾಯವಾಗಿ ಸೋಲುಂಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಅಮರಿಂದರ್ ಸಿಂಗ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಘರ್ಷಣೆ ಮಾಡಿದ್ದರಿಂದ ಕಾಂಗ್ರೆಸ್ ಆಂತರಿಕವಾಗಿ ಕುಸಿಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯಗಳಲ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಭಾನುವಾರ ನಡೆದ ಕಾಂಗ್ರೆಸ್ ನಾಯಕತ್ವದ ಸಭೆಯ ನಂತರ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪಕ್ಷದ ನಾಯಕರು ಹೇಳುವಂತೆ, ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು ‘ಪಕ್ಷದ ಹಿತಾಸಕ್ತಿಗಾಗಿ ತ್ಯಾಗ’ ಎಂದು ಪ್ರಸ್ತುತಪಡಿಸಿದರು. ಆದರೆ ಅದನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು, ಆದರೆ ನಾವೆಲ್ಲರೂ ಇದನ್ನು ತಿರಸ್ಕರಿಸಿದ್ದೇವೆ” ಎಂದು ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿಲ್ಲ.

ನಾಲ್ಕೂವರೆ ಗಂಟೆಗಳ ಸಭೆಯ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ‘ಪರಿಣಾಮಕಾರಿ ಮತ್ತು ತಕ್ಷಣದ ಕ್ರಮಗಳನ್ನು’ ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದೆ.

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ತನ್ನ ಎಲ್ಲಾ ಮಾಜಿ ನಾಯಕರ ವೀಡಿಯೊವನ್ನು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಪಕ್ಷದಲ್ಲಿ ಗಾಂಧಿ ಕುಟುಂಬವು ಅಧಿಕಾರದಲ್ಲಿ ಉಳಿಯುತ್ತದೆ ಎಂದು ಸೂಚಿಸುತ್ತದೆ.

ಕಾಂಗ್ರೆಸ್ “ಭಿನ್ನಮತೀಯರು” ಅಥವಾ G-23 ನಾಯಕರ ಗುಂಪು ಸೋನಿಯಾ ಗಾಂಧಿಯವರಿಗೆ ವ್ಯಾಪಕವಾದ ಸಾಂಸ್ಥಿಕ ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ಜಿ -23 ರ ಪ್ರಮುಖ ಸದಸ್ಯರಾದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಗಾಂಧಿಗಳು ಪಕ್ಕಕ್ಕೆ ಸರಿದು, ಪಕ್ಷವನ್ನು ಮುನ್ನಡೆಸಲು ಬೇರೆ ನಾಯಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಲೆ ಉತ್ತಮ ನಾಯಕತ್ವ ಇಲ್ಲದೆ ಕೆಳಗಿನ ನಾಯಕತ್ವ ಬೆಳೆಯದು. ದೇಶ ಇಂದು ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಹೊರಬರಲು, ದೂರಗಾಮಿ ನೋಟ, ಗುರಿ ಮತ್ತು ಅದನ್ನು ಜನಮನದಲ್ಲಿ ಸ್ಥಾಪಿಸಿ ಹೋರಾಟದ ಕಿಚ್ಚು ಹಚ್ಚುವಲ್ಲಿ ಕಾಂಗ್ರೆಸ್ ನಾಯಕತ್ವ ಸೋತಿದೆ ಒಮ್ಮೆ ಅಲ್ಲ, ಅನೇಕ ಬಾರಿ! ಆದ್ದರಿಂದ, ಕಾಂಗ್ರೆಸ್ ಪರ್ಯಾಯ ರಾಜಕಾರಣದ ಶಕ್ತಿಯಾಗಿ ಏಳಲು ಮೊದಲು, ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೆರೆದ ಮನಸ್ಸಿನಿಂದ ಯೋಚಿಸಿ, ಕೆಳಗಿಳಿದು, ಹುಮ್ಮನಸ್ಸಿನಿಂದ ಪಕ್ಷ ಕಟ್ಟುವ ನಾಯಕತ್ವವನ್ನು ರೂಪಿಸಲು ಅನುವು ಮಾಡಿಕೊಡಬೇಕು. ಕಾಂಗ್ರೆಸ್ ನ ಮತ್ತು ಮುಖ್ಯವಾಗಿ, ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂಬುದು ನನ್ನ ನಮ್ರ ಅನಿಸಿಕೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...