Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....