Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...