Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...