Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...