Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....