Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...