Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...