Homeಮುಖಪುಟಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

ವಿರೋಧ ಪಕ್ಷಗಳೆಲ್ಲವೂ ಗೌರವಿಸುವ ಸೋನಿಯಾ ಗಾಂಧಿಯವರೇ ಸಭೆ ಕರೆಯುವ ಮೂಲಕ ಕಾಂಗ್ರೆಸ್ ಜಾಣ ಹೆಜ್ಜೆ ಇರಿಸಿದೆ.

- Advertisement -
- Advertisement -

/ನಾನುಗೌರಿ ಡೆಸ್ಕ್/
ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ ಸಾರಿಯ ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರದ ಕೆಲಸವನ್ನು ರಾಹುಲ್‍ಗಾಂಧಿ ಮಾಡಿದರೆ, ಉತ್ತರ ಪ್ರದೇಶದಲ್ಲಿ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಬಿರುಸಿನ ಪ್ರಚಾರ ನಡೆಸಿದ್ದರು. ರಾಯ್‍ಬರೇಲಿಗೆ ಒಮ್ಮೆ ಹೋಗಿದ್ದು ಬಿಟ್ಟರೆ ಸೋನಿಯಾ ಎಲ್ಲೂ ಕಾಣಿಸದೇ ಇದ್ದುದಕ್ಕೆ ಅನಾರೋಗ್ಯ ಕಾರಣವೆಂದು ಹೇಳಲಾಗಿತ್ತು. ಆದರೆ, ಕಳೆದ 15 ದಿನಗಳಿಂದಲೂ ದೇಶದ ವಿವಿಧ ವಿರೋಧ ಪಕ್ಷಗಳ ನಾಯಕರ ಜೊತೆ ಸೋನಿಯಾ ಸತತವಾಗಿ ಸಂಪರ್ಕದಲ್ಲಿದ್ದರೆಂದು ಎನ್‍ಡಿಟಿವಿ ವರದಿ ಮಾಡಿದೆ.
ಎನ್‍ಡಿಟಿವಿ ವರದಿ
ಇದೀಗ ಮೇ 23ರ ಸಂಜೆಯ ಸಭೆಗೆ ಆಹ್ವಾನಿಸಿ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಈಗಾಗಲೇ ಪತ್ರವು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಜೆಡಿಎಸ್‍ನ ಎಚ್.ಡಿ.ದೇವೇಗೌಡ ಮತ್ತು ಜೆಡಿಯುನ ಶರದ್‍ಪವಾರ್ ಅವರಿಗೆ ತಲುಪಿದ್ದು, ಇವರೇ ಅಲ್ಲದೇ ಎಲ್ಲಾ ವಿರೋಧ ಪಕ್ಷಗಳನ್ನೂ ಆಹ್ವಾನಿಸಲಾಗುತ್ತಿದೆಯೆಂದು ವರದಿ ಹೇಳುತ್ತದೆ.

ಇದಲ್ಲದೇ, ಒರಿಸ್ಸಾದ ನವೀನ್ ಪಟ್ನಾಯಕ್ ಅವರ ಶಾಲಾ ಸಹಪಾಠಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಮಾತಾಡಿದ್ದರೆ, ಯುಪಿಎ ಒಡನಾಡಿ ಶರದ್‍ಪವಾರ್ ಮಾಯಾವತಿಯವರ ಜೊತೆ ಮಾತಾಡಿದ್ದಾರೆ. ಫೆಡರಲ್ ಫ್ರಂಟ್ ರಚನೆಯ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‍ರ ಜೊತೆ ಕಾಂಗ್ರೆಸ್‍ನ ಖಜಾಂಚಿ ಅಹ್ಮದ್ ಪಟೇಲ್ ಮತ್ತು ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸಂಪರ್ಕದಲ್ಲಿದ್ದಾರೆ.

ಈ ಸಭೆಯ ವಿಚಾರ ಬಹಿರಂಗವಾಗುವುದಕ್ಕೆ ಒಂದು ದಿನ ಮುಂಚೆಯಷ್ಟೇ ಗುಲಾಂ ನಬಿ ಆಜಾದ್ ಒಂದು ಮುಖ್ಯವಾದ ಸಂಗತಿಯನ್ನು ಮಾಧ್ಯಮಗಳ ಮುಂದೆ ಹೇಳಿದ್ದರು. ‘ಕಾಂಗ್ರೆಸ್‍ಗೇ ಪ್ರಧಾನಿ ಪಟ್ಟ ಕೊಡಲೇಬೇಕೆಂದೇನೂ ನಾವು ಬಯಸುವುದಿಲ್ಲ’ ಎಂದು ಗುಲಾಂ ನಬಿ ಹೇಳಿದ್ದಾರೆಂದರೆ, ಸ್ವತಃ ಸೋನಿಯಾಗಾಂಧಿಯವರ ಕುಟುಂಬವೇ ಮಾತಾಡಿದೆ ಎಂದೇ ಅರ್ಥ.


ಯಾರಿಗೂ ಬಹುಮತ ಬರುವುದಿಲ್ಲವೆಂಬುದು ಬಹುತೇಕ ಖಚಿತ. ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಇಬ್ಬರೂ ಕಾಂಗ್ರೆಸ್, ಬಿಜೆಪಿಗಳಿಂದ ಸಮಾನ ದೂರ ಎನ್ನುತ್ತಿದ್ದಾರಾದರೂ, ಎಸ್‍ಪಿ, ಬಿಎಸ್‍ಪಿ ಮತ್ತು ಟಿಎಂಸಿಗಳಿಗೆ ಪ್ರಧಾನ ಗುರಿ ಮೋದಿ-ಷಾಗಳೇ ಆಗಿದ್ದಾರೆ. ಇನ್ನು ಟಿಡಿಪಿಯ ಚಂದ್ರಬಾಬು ಜೊತೆ ಈ ಸಾರಿ ಕಾಂಗ್ರೆಸ್‍ಗೆ ಮೈತ್ರಿ ಇಲ್ಲವಾದರೂ, ಅವರು ಕಾಂಗ್ರೆಸ್ ಜೊತೆಗೆ ಇರುವ ಸುಳಿವು ನೀಡಿದ್ದಾರೆ. ಡಿಎಂಕೆಯ ಸ್ಟಾಲಿನ್ ಅಂತೂ ರಾಹುಲ್‍ಗಾಂಧಿಯ ಹೆಸರನ್ನು ಮೊದಲು ಪ್ರಧಾನಿ ಪಟ್ಟಕ್ಕೆ ಸೂಚಿಸಿದವರು. ಕೆಸಿಆರ್ ‘ಫೆಡರಲ್ ಫ್ರಂಟ್ ಮಾಡೋಣ ಬನ್ನಿ’ ಎಂದಾಗ, ‘ನೀವೇ ಬನ್ನಿ ಯುಪಿಎ ಜೊತೆಗೆ ಸರ್ಕಾರ ಮಾಡೋಣ. ಈ ಸಾರಿ ನೀವು ಹೇಳೋದು ಸಾಧ್ಯವಿಲ್ಲ’ ಎಂದು ಸ್ಪಷ್ಟವಾಗಿ ಸ್ಟಾಲಿನ್ ಹೇಳಿದ್ದಾರೆ.
ಇವೆಲ್ಲದರ ಹಿನ್ನೆಲೆಯಲ್ಲಿ ಸೋನಿಯಾರ ಸಭೆಗೆ ಮಹತ್ವ ಬಂದಿದೆ. ಸರ್ಕಾರ ರಚನೆಯಾಗುವುದಾದರೆ, ಕಾಂಗ್ರೆಸ್‍ಗೆ ಮಹತ್ವದ ಪಾತ್ರ ಇರಬೇಕು, ಆದರೆ ರಾಹುಲ್‍ಗಾಂಧಿಯೇ ಪ್ರಧಾನಿಯಾಗಬೇಕೆಂದೇನಿಲ್ಲ ಎಂಬುದು ಅವರ ಇರಾದೆ ಇದ್ದಂತಿದೆ.
ಇದನ್ನೂ ಓದಿ: ಸರ್ಕಾರ ಮಾಡಲು ಒಲವು ತೋರದ ರಾಹುಲ್
ಈ ಮಧ್ಯೆ 30ರಷ್ಟು ಸೀಟುಗಳನ್ನು ಗೆಲ್ಲಲಿರುವ ಮಮತಾ ಬ್ಯಾನರ್ಜಿಯವರ ನಿಲುವಿಗೆ ಹೆಚ್ಚಿನ ಮಹತ್ವ ಇರಲಿದೆ. ಎನ್‍ಡಿಟಿವಿಯಲ್ಲಿ ಪತ್ರಕರ್ತೆ ಸ್ವಾತಿ ಚತುರ್ವೇದಿ ಬರೆದಿರುವ ಲೇಖನದಲ್ಲಿ ಇದರ ಕುರಿತು ಒಂದು ವಿಶೇಷ ಸುಳಿವಿದೆ. ಟಿಎಂಸಿ ನಾಯಕರ ಪ್ರಕಾರ, ‘ಬಿಜೆಪಿಯ ಜೊತೆಗೆ ಹೋಗಲು ಅಂತಹ ಸಮಸ್ಯೆ ಇಲ್ಲ. ಆದರೆ ವಿಷಕಾರಿ ರಾಜಕಾರಣ ಮಾಡುವ ಮೋದಿ-ಷಾ ತೊಲಗಬೇಕು’. ಮೇ 23ರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಮಾಯಾವತಿಯವರು ಭಾಗವಹಿಸುವ ಸಾಧ್ಯತೆ ಇಲ್ಲ. ಅಖಿಲೇಶ್ ಯಾದವ್, ಕೆಸಿಆರ್ ಮತ್ತು ನವೀನ್ ಪಟ್ನಾಯಕ್ ಸಹಾ ಫಲಿತಾಂಶ ಸಂಪೂರ್ಣ ನಿಚ್ಚಳವಾದ ನಂತರವೇ ತಮ್ಮ ಮನದಿಂಗಿತ ವ್ಯಕ್ತಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಫೆಡರಲ್ ಫ್ರಂಟ್ ರಚನೆಯ ಸಿದ್ಧತೆಯಲ್ಲಿ ಕೆಸಿಆರ್
ಆದರೆ, ಕಾಂಗ್ರೆಸ್ ತನ್ನ ದಾಳವನ್ನು ಉರುಳಿಸಿ ಆಗಿದೆ. ಸೋನಿಯಾಗಾಂಧಿಯವರೇ ಸಭೆ ಕರೆಯಲೂ ಕಾರಣವಿದೆ. ಯುಪಿಎ ಜೊತೆಗಿಲ್ಲದ ಪಕ್ಷಗಳಾಗಲೀ, ಯುಪಿಎ ಭಾಗವಾಗಿರುವ ಪಕ್ಷಗಳೇ ಆಗಲಿ, ಸೋನಿಯಾರ ಬಗ್ಗೆ ವಿಶೇಷ ಗೌರವವನ್ನು ಹೊಂದಿದ್ದಾರೆ. ಹಾಗಾಗಿ ಈ ನಡೆಯು ರಾಜಕೀಯ ವಲಯಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...