Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...