Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...