Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...