Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...