Homeನಿಜವೋ ಸುಳ್ಳೋFact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ...

Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

- Advertisement -
- Advertisement -

ಜಗತ್ತಿಗೆ ಕೊರೊನಾ ಚಿಂತೆಯಾದರೆ ಪೋಸ್ಟ್‌ ಕಾರ್ಡ್ ಕನ್ನಡಕ್ಕೆ ಕಾಂಗ್ರೆಸ್‌ ಚಿಂತೆಯಾಗಿದೆ. ಹಾಗಾಗಿ ಅದು ಕಾಂಗ್ರೆಸ್‌ ಕುರಿತು, ಅದರ ಮುಖ್ಯಸ್ಥರ ಕುರಿತು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿದೆ.

ಇಂದು ಇದೇ ಪೋಸ್ಟ್‌ ಕಾರ್ಡ್ ಕನ್ನಡ ಮತ್ತೊಂದು ಸುಳ್ಳು ಸುದ್ದಿ ಹಬ್ಬಿಸಿದೆ. ಅದು ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತೆ ರಾಜಕಾರಣಿ ಎಂದು ವ್ಯಾಖ್ಯಾನಿಸಿದೆ. ಇದೇ ವೆಬ್‌ಸೈಟ್‌ ಈ ಹಿಂದೆ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂದು ಪೋಸ್ಟರ್‌ ಮಾಡಿ ಹಂಚಿತ್ತು.

ಜೊತೆಗೆ ಸಪೋರ್ಟ್ ಮೋದಿಜಿ ಅಂಡ್ ಬಿಜೆಪಿ ಎಂಬ ಇಂಗ್ಲಿಷ್ ಪೇಜ್‌ನಲ್ಲಿಯೂ ಇದೇ ಸುದ್ದಿ ಹರಿದಾಡಿದೆ. ಆಜ್ ತಕ್, ಒನ್‌ಇಂಡಿಯಾ, ದೈನಿಕ್ ಭಾಸ್ಕರ್ ಮತ್ತು ಸ್ವರಾಜ್ ನ್ಯೂಸ್‌ನಂತಹ ಚಾನೆಲ್‌ಗಳು ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಎಂದು ಸುದ್ದಿ ಮಾಡಿವೆ.

ಈ ರೀತಿಯ ಸುದ್ದಿ ಕಳೆದ ಹಲವು ವರ್ಷಗಳಿಂದ ವೈರಲ್‌ ಆಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ ಚೆಕ್‌ ನಡೆಸಿದೆ.

ಫ್ಯಾಕ್ಟ್‌ ಚೆಕ್‌

ಸತ್ಯ: ಸೋನಿಯಾ ಗಾಂಧಿ ವಿಶ್ವದ ನಾಲ್ಕನೇ ಶ್ರೀಮಂತ ಮಹಿಳೆ ಎಂಬುದು ಅಪ್ಪಟ ಸುಳ್ಳು. 2019ರ ಲೋಕಸಭಾ ಚುನಾವಣೆಗೆ ಅವರು ಸ್ಪರ್ಧಿಸಿದ್ದಾಗ ತಮ್ಮ ಬಳಿ 11.82 ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

ಗೂಗಲ್‌ನಲ್ಲಿ ಪ್ರಪಂಚದ ಶ್ರೀಮಂತ ಮಹಿಳೆಯರ ಪಟ್ಟಿ ಪರಿಶೀಲಿಸಿದರೆ ಗೊತ್ತಾಗಿಬಿಡುತ್ತದೆ ಅವರು ಆ ಪಟ್ಟಿಯಲ್ಲಿಲ್ಲ ಎಂದು. ಹೋಗಲಿ ‘ವಿಶ್ವದ ನಾಲ್ಕನೇ ಶ್ರೀಮಂತ ಮಹಿಳಾ ರಾಜಕಾರಣಿ’ ಆಗಿದ್ದಾರ ಎಂದು ಚೆಕ್ ಮಾಡಿದರೆ ಅದು ಸಹ ಅಪ್ಪಟ ಸುಳ್ಳು ಸುದ್ದಿ. ಈ ಸುಳ್ಳನ್ನು ಮೊದಲು 2012ರಲ್ಲಿ ಪ್ರಕಟಿಸಿದ ಅಮೆರಿಕಾದ ಬಿಸಿನೆಸ್ ಇನ್‌ಸೈಡರ್ ಪತ್ರಿಕೆಯು ಸೋರ್ಸ್ ಎಂದು ‘World’s Luxury Guide’ ಅನ್ನು ಹೆಸರಿಸಿದೆ. ಅದರ ಮೂಲ ಹುಡುಕಿದರೆ ಆ ವೆಬ್‌ಸೈಟ್ ನಾಟ್ ಫಂಡ್ ಎಂದು ಬರುತ್ತಿದೆ.

ಈ ಬಿಸಿನೆಸ್‌ ಇನಸೈಡರ್‌ ಸೋರ್ಸ್‌ ಎಂದು ಫೋರ್ಬ್ಸ್‌, ದಿ ಗಾರ್ಡಿಯನ್‌, ಬ್ಲೂಮ್‌ಬರ್ಗ್‌, ಓಪನ್‌ ಸಿಕ್ರೇಟ್‌ ಎಂದು ಹೆಸರಿಸಿದೆ.

ಫೋರ್ಬ್ಸ್ 2011 ರಲ್ಲಿ ಒಂದು ಲೇಖನವನ್ನು ಪ್ರಕಟಿಸಿತ್ತು – ‘ಭಾರತದ 100 ಶ್ರೀಮಂತರು’ – ಇದರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. 2012 ರಲ್ಲಿ, ದಿ ಗಾರ್ಡಿಯನ್ ವಿಶ್ವದ ಶ್ರೀಮಂತ ನಾಯಕರ ಬಗ್ಗೆ ವರದಿಯನ್ನು ಪ್ರಕಟಿಸಿತ್ತು. ಆದರೆ, ಇಲ್ಲಿಯೂ ಕೂಡ ಸೋನಿಯಾ ಗಾಂಧಿಯವರ ಹೆಸರನ್ನು ಒಳಗೊಂಡಿಲ್ಲ. ಬ್ಲೂಮ್‌ಬರ್ಗ್‌ನಲ್ಲಿ ಹುಡುಕಿದರೂ ಈ ಬಗ್ಗೆ ವರದಿಯಾಗಿದ್ದು ಕಂಡುಬಂದಿಲ್ಲ. ಬಿಸಿನೆಸ್ ಇನ್ಸೈಡರ್ ಒದಗಿಸಿದ ಉಳಿದ ವೆಬ್‌ ಸೈಟ್‌ಗಳು – ಓಪನ್ ಸಿಕ್ರೆಟ್ ಸಹ ಹಾಲಿ ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಯಾವುದೇ ವರದಿಯನ್ನು ಬರೆದಿಲ್ಲ.

ಬಿಸಿನೆಸ್ ಇನ್ಸೈಡರ್ (ಮತ್ತು ‘ವರ್ಲ್ಡ್ಸ್ ಐಷಾರಾಮಿ ಗೈಡ್’) ನಂಬಬಹುದಾದ ಮೂಲವಲ್ಲ ಎಂಬುದು ಹೀಗೆ ಸ್ಪಷ್ಟವಾಯಿತು.

ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...