HomeUncategorizedಲೋಕಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಸೋನಿಯಾಗಾಂಧಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧೆ

ಲೋಕಸಭೆ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಸೋನಿಯಾಗಾಂಧಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸ್ಪರ್ಧೆ

- Advertisement -
- Advertisement -

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸಿದ್ಧರಾಗಿದ್ದಾರೆ. ಸೋನಿಯಾ ಗಾಂಧಿ ಅವರು ಬೆಳಿಗ್ಗೆ ದೆಹಲಿಯ ನಿವಾಸದಿಂದ ಹೊರಟು 10 ಗಂಟೆಗೆ ಜೈಪುರ ತಲುಪಿದ್ದಾರೆ. ವರದಿಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಆರೋಗ್ಯ ಕಾರಣಗಳಿಂದಾಗಿ ರಾಜ್ಯಸಭೆಗೆ ತೆರಳಲು ನಿರ್ಧರಿಸಿದ್ದು, ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದ್ದಾರೆ ಮತ್ತು ಸೋನಿಯಾ ಯಾವಾಗಲೂ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ದ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಗೆಹ್ಲೋಟ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಹಲವು ಬಾರಿ ಭೇಟಿ ಮಾಡಿದ್ದಾರೆ. ಕೆಲವು ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸೋಮವಾರ ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಕೆಸಿ ವೇಣುಗೋಪಾಲ್ ಭಾಗವಹಿಸಿದ್ದ ಪಕ್ಷದ ಮುಖಂಡರ ಉನ್ನತ ಮಟ್ಟದ ಸಭೆಯ ನಂತರ, ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದು ಮೇಲ್ಮನೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾಜಸ್ಥಾನವಲ್ಲದೆ ಕಾಂಗ್ರೆಸ್‌ ಪಕ್ಷವು ಹಿಮಾಚಲ ಪ್ರದೇಶವನ್ನು ಅವರ ಸ್ಪರ್ಧೆಗೆ ಆಯ್ಕೆಯನ್ನು ಹೊಂದಿತ್ತು. ಆದರೆ ಸೋನಿಯಾ ಗಾಂಧಿಯವರು ರಾಜಸ್ಥಾನವನ್ನು ಆಯ್ಕೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

1998 ಮತ್ತು 2022ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1999ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಆಯ್ಕೆಯಾಗಿದ್ದರು ಮತ್ತು ಅಮೇಥಿಯನ್ನು ಉಳಿಸಿಕೊಂಡಿದ್ದರು. 2004ರಲ್ಲಿ ರಾಹುಲ್ ಗಾಂಧಿಗಾಗಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.

ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸದಸ್ಯರು ಏಪ್ರಿಲ್‌ನಲ್ಲಿ ನಿವೃತ್ತರಾಗುತ್ತಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳ ಕ್ಷಮದಾನ ರದ್ಧತಿ ವೇಳಿನ ವಿಮರ್ಶಾತ್ಮಕ ಟೀಕೆಯನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಮೊರೆ ಹೋದ ಗುಜರಾತ್‌ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...