Homeಮುಖಪುಟಮೋದಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ: ಜೈಪುರದಲ್ಲಿ ಸೋನಿಯಾ ಗಾಂಧಿ ವಾಗ್ಧಾಳಿ

ಮೋದಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ: ಜೈಪುರದಲ್ಲಿ ಸೋನಿಯಾ ಗಾಂಧಿ ವಾಗ್ಧಾಳಿ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ನಿನ್ನೆ ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ‘ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನವನ್ನು ಬದಲಾಯಿಸಲು ಪಿತೂರಿ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಜೈಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, “ಮೋದಿ ಜಿ ದೇಶ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದ್ದಾರೆ’. ವಿಪಕ್ಷ ನಾಯಕರನ್ನು ಬೆದರಿಸಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದ್ದು, ಬಿಜೆಪಿಗೆ ಸೇರುವಂತೆ ಒತ್ತಾಯಿಸಲಾಗುತ್ತಿದೆ. ಎಲ್ಲೆಡೆ ಅನ್ಯಾಯದ ಕತ್ತಲೆ ಇದೆ, ಎಲ್ಲಾ ಮತದಾರರು ನ್ಯಾಯಕ್ಕಾಗಿ ಬಿಜೆಪಿ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ, ನಿರುದ್ಯೋಗ, ಹಣದುಬ್ಬರ, ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ಸರ್ಕಾರವು ಯಾವುದೇ ಮಹತ್ವದ ಹೆಜ್ಜೆಯನ್ನು ಇಟ್ಟಿಲ್ಲ ಎಂದು ರಾಜ್ಯಸಭಾ ಸಂಸದರು ಕೂಡ ಆಗಿರುವ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ. ನಮ್ಮ ದೇಶದ ಸಂವಿಧಾನ ಬದಲಾವಣೆಗೆ ಷಡ್ಯಂತ್ರವನ್ನು ಮಾಡಲಾಗುತ್ತಿದೆ. ಸರಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಲಾಗುತ್ತಿದೆ ಎಂದ ಸೋನಿಯಾ ಗಾಂಧಿ,  ನಿರುದ್ಯೋಗ, ಹಣದುಬ್ಬರ, ಅಸಮಾನತೆ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರ್ಯಾಲಿಯಲ್ಲಿ ವಿರೋಧ ಪಕ್ಷದ ನಾಯಕರಾದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಕೂಡ ಮಾತನಾಡಿದ್ದಾರೆ,

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿ,  ನಿರುದ್ಯೋಗ, ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಚುನಾವಣೆ ಸಮಯದಲ್ಲಿ ಗ್ಯಾಸ್ ಬೆಲೆ ಇಳಿಕೆ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಐಟಂಗೆ ಜಿಎಸ್‌ಟಿ ಸೇರಿಸಲಾಗಿದೆ ಎಂದು ಪ್ರಿಯಾಂಕಾ ಹೇಳಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಹಾಕಲಿರುವ ಮತಗಳು ದೇಶದ ಪ್ರಜಾಪ್ರಭುತ್ವವನ್ನು ಉಳಿಸಲಿವೆ. ನಮ್ಮ ಪ್ರಜಾಪ್ರಭುತ್ವ ಹೇಗೆ ಅಪಾಯದಲ್ಲಿದೆ ಎಂದು ನೀವು ಆಶ್ಚರ್ಯ ಪಡಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ರೂಪುಗೊಂಡ ದೊಡ್ಡ ಸಂಸ್ಥೆಗಳು ದುರ್ಬಲಗೊಳ್ಳುತ್ತಿವೆ, ಅವುಗಳು ದುರುಪಯೋಗವಾಗುತ್ತಿವೆ. ಇಂದು ಎಂತಹಾ ಪರಿಸ್ಥಿತಿ ಇದೆ ಎಂದರೆ, ಇವಿಎಂ ಮೇಲೆ ಜನರಿಗೆ ನಂಬಿಕೆಯಿಲ್ಲದ ಪರಿಸ್ಥಿತಿ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ನಿನ್ನೆ ಬಿಡುಗಡೆಯಾದ ಕಾಂಗ್ರೆಸ್ ‘ನ್ಯಾಯ ಪತ್ರ’ ಪ್ರಣಾಳಿಕೆಯ ಬಗ್ಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಣಾಳಿಕೆಯು ಚುನಾವಣೆಯ ನಂತರ ಅವರು ಮರೆತುಬಿಡುವ ಘೋಷಣೆಗಳ ಪಟ್ಟಿಯಲ್ಲ,  ಇದು ನ್ಯಾಯವನ್ನು ಬಯಸುವ ರಾಷ್ಟ್ರದ ಧ್ವನಿಯಾಗಿದೆ ಎಂದು ಹೇಳಿದರು. ಇಂದು ನಿರುದ್ಯೋಗ ಉತ್ತುಂಗದಲ್ಲಿದೆ, ನಿರುದ್ಯೋಗ ನಿವಾರಣೆಗೆ ಬಿಜೆಪಿ ಮತ್ತು ಮೋದಿ ಸರ್ಕಾರ ಏನು ಮಾಡಿದೆ? ಭರವಸೆಗಳನ್ನು ನೀಡಿತು ಆದರೆ ಈಡೇರಿಸಲಿಲ್ಲ. ಜನರ ಭರವಸೆಯನ್ನು ಮುರಿದು ಅಗ್ನಿವೀರ್ ಯೋಜನೆ ತಂದರು. ಪ್ರತಿ ರಾಜ್ಯದಲ್ಲೂ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಆದರೆ, ಪ್ರಧಾನಿ ಮೋದಿ ಅವರ ಮಾತನ್ನು ಕೇಳಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...