Homeಮುಖಪುಟಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

- Advertisement -
- Advertisement -

ಗಾಝಾ ಮತ್ತು ಇರಾನ್ ಮೇಲಿನ ಇಸ್ರೇಲ್ ಆಕ್ರಮಣದ ಬಗ್ಗೆ ಭಾರತದ ಮೌನವು “ತನ್ನ ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿಯೂ ಆಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

“ಭಾರತದ ಧ್ವನಿ ಕೇಳಲು ಇನ್ನೂ ತಡವಾಗಿಲ್ಲ” ಎಂಬ ಲೇಖನದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಸೋನಿಯಾ ಗಾಂಧಿ, ಮೋದಿ ಸರ್ಕಾರವು ಇಸ್ರೇಲ್ ಜೊತೆಗೆ ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಕಲ್ಪಿಸಿಕೊಳ್ಳುವ ಶಾಂತಿಯುತ ದ್ವಿರಾಷ್ಟ್ರ ಪರಿಹಾರದ ಕುರಿತು ಭಾರತದ ದೀರ್ಘಕಾಲೀನ ಬದ್ಧತೆಯನ್ನು ಕೈಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕದ ಅಂತ್ಯವಿಲ್ಲದ ಯುದ್ಧಗಳ ವಿರುದ್ಧ ಮಾತನಾಡಿದ ಸೋನಿಯಾ ಗಾಂಧಿ, ಪಶ್ಚಿಮ ಏಷ್ಯಾದಲ್ಲಿ ‘ವಿನಾಶಕಾರಿ ಮಾರ್ಗ’ ಅನುಸರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಲೇಖನದಲ್ಲಿ ಟೀಕಿಸಿದ್ದಾರೆ.

“ಗಾಝಾದಲ್ಲಿನ ವಿನಾಶದ ಬಗ್ಗೆ ಮತ್ತು ಈಗ ಇರಾನ್ ವಿರುದ್ಧದ ಅಪ್ರಚೋದಿತ ದಾಳಿ ಬಗ್ಗೆ ಹೊಸದಿಲ್ಲಿಯ ಮೌನವು ನಮ್ಮ ನೈತಿಕ ಮತ್ತು ರಾಜತಾಂತ್ರಿಕ ಸಂಪ್ರದಾಯಗಳಿಂದ ಕಳವಳಕಾರಿ ನಿರ್ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಧ್ವನಿಯ ನಷ್ಟ ಮಾತ್ರವಲ್ಲ, ಬದಲಾಗಿ, ಮೌಲ್ಯಗಳ ಶರಣಾಗತಿಯೂ ಹೌದು” ಎಂದು ‘ದಿ ಹಿಂದೂ’ ದಲ್ಲಿನ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.

“ಇನ್ನೂ ತಡವಾಗಿಲ್ಲ. ಭಾರತವು ಸ್ಪಷ್ಟವಾಗಿ ಮಾತನಾಡಬೇಕು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಪರಸ್ಪಪರ ಮಾತುಕತೆಗೆ ಮರಳಲು ಉತ್ತೇಜಿಸಲು ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ಈ ಮಾನವೀಯ ದುರಂತದ ಸಂದರ್ಭದಲ್ಲಿ, “ನರೇಂದ್ರ ಮೋದಿ ಸರ್ಕಾರವು ಶಾಂತಿಯುತ ದ್ವಿ-ರಾಷ್ಟ್ರ ಪರಿಹಾರದ ಕುರಿತಂತೆ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ಬದ್ಧತೆಯನ್ನು ಬಹುತೇಕ ಕೈಬಿಟ್ಟಿದೆ, ದ್ವಿ-ರಾಷ್ಟ್ರ ಪರಿಹಾರವು ಸಾರ್ವಭೌಮ, ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಇಸ್ರೇಲ್ ಜೊತೆ ಪರಸ್ಪರ ಭದ್ರತೆ ಮತ್ತು ಘನತೆಯಿಂದ ಬದುಕುವ ಕಲ್ಪನೆಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಜೂನ್ 13, 2025 ರಂದು, ಇಸ್ರೇಲ್ ಇರಾನ್ ಮತ್ತು ಅದರ ಸಾರ್ವಭೌಮತ್ವದ ವಿರುದ್ಧ ತೊಂದರೆ ಕೊಡುವ ಮತ್ತು ಕಾನೂನುಬಾಹಿರ ದಾಳಿಯನ್ನು ಪ್ರಾರಂಭಿಸಿದ ಬಳಿಕ ಏಕಪಕ್ಷೀಯ ಮಿಲಿಟರಿಸಂನ ಅಪಾಯಕಾರಿ ಪರಿಣಾಮಗಳನ್ನು ಜಗತ್ತು ಮತ್ತೊಮ್ಮೆ ಕಂಡಿದೆ ಎಂದು ಸೋನಿಯಾ ಗಾಂಧಿ ಬೊಟ್ಟು ಮಾಡಿದ್ದಾರೆ.

ಇರಾನ್ ನೆಲದಲ್ಲಿ ನಡೆದ ಈ ಬಾಂಬ್ ದಾಳಿಗಳು ಮತ್ತು ಗುರಿಯಿಟ್ಟು ನಡೆದ ಹತ್ಯೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸಿದೆ. ಇದು ಗಂಭೀರ ಪ್ರಾದೇಶಿಕ ಮತ್ತು ಜಾಗತಿಕ ಪರಿಣಾಮಗಳೊಂದಿಗೆ ಅಪಾಯಕಾರಿ ಅಸ್ತಿರತೆಯನ್ನು ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಗಾಝಾದಲ್ಲಿ ಕ್ರೂರ ಆಕ್ರಮಣ ಸೇರಿದಂತೆ ಇಸ್ರೇಲ್‌ನ ಇತ್ತೀಚಿನ ಹಲವು ಕ್ರಮಗಳಂತೆ, ಈ ಕಾರ್ಯಾಚರಣೆಯನ್ನು ನಾಗರಿಕ ಜೀವನ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ನಡೆಸಲಾಗಿದೆ. ಈ ಕ್ರಮಗಳು ಅಸ್ಥಿರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಮತ್ತಷ್ಟು ಸಂಘರ್ಷದ ಬೀಜಗಳನ್ನು ಬಿತ್ತುತ್ತದೆ” ಎಂದಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಪ್ರಸ್ತುತ ಇಸ್ರೇಲಿ ನಾಯಕತ್ವವು “ಶಾಂತಿಯನ್ನು ದುರ್ಬಲಗೊಳಿಸುವ ಮತ್ತು ಉಗ್ರವಾದವನ್ನು ಪೋಷಿಸುವ ದೀರ್ಘ ಮತ್ತು ದುರದೃಷ್ಟಕರ ದಾಖಲೆಯನ್ನು ಹೊಂದಿದೆ” ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ದಾಖಲೆಯನ್ನು ಗಮನಿಸಿದರೆ, “ನೆತನ್ಯಾಹು ಅವರು ಒಪ್ಪಂದಕ್ಕಿಂತ ಉದ್ವಿಗ್ನತೆಯನ್ನು ಹೆಚ್ಚಿಸಿಕೊಳ್ಳುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

ಅಮೆರಿಕ ಅಧ್ಯಕ್ಷರನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಜೂನ್ 17 ರಂದು ತನ್ನ ಸ್ವಂತ ಗುಪ್ತಚರ ಮುಖ್ಯಸ್ಥರ ಮೌಲ್ಯಮಾಪನವನ್ನು ತಳ್ಳಿಹಾಕಿ, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲು ತುಂಬಾ ಹತ್ತಿರದಲ್ಲಿದೆ ಎಂದು ಟ್ರಂಪ್ ಹೇಳಿರುವುದು ತೀವ್ರ ನಿರಾಶಾದಾಯಕ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಗತ್ತು ನಿರೀಕ್ಷಿಸುತ್ತಿರುವುದು ಮತ್ತು ಜಗತ್ತಿಗೆ ಬೇಕಾಗಿರುವುದು ಸತ್ಯಗಳನ್ನು ಆಧರಿಸಿದ ರಾಜತಾಂತ್ರಿಕತೆಯಿಂದ ದೇಶ ನಡೆಸಲ್ಪಡುವ ನಾಯಕತ್ವ ಆಗಿದೆ. ಅಲ್ಲದೆ, ಬಲವಂತ ಅಥವಾ ಸುಳ್ಳುಗಳಿಂದಲ್ಲ ದೇಶ ನಡೆಸುವವರು ಅಲ್ಲ. ಇರಾನ್ ಭಾರತದ ದೀರ್ಘಕಾಲದ ಸ್ನೇಹಿತನಾಗಿದ್ದು, ದೊಡ್ಡ ಮಟ್ಟದ ನಾಗರಿಕ ಸಂಬಂಧಗಳೊಂದಿಗೆ ಅದು ನಮ್ಮೊಂದಿಗೆ ಇದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಂದರ್ಭಗಳಲ್ಲಿ ಭಾರತಕ್ಕೆ ದೃಢ ಬೆಂಬಲ ನೀಡಿದ ಇತಿಹಾಸ ಇರಾನ್‌ಗೆ ಇದೆ. 1994 ರಲ್ಲಿ, ಕಾಶ್ಮೀರ ವಿಷಯದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತವನ್ನು ಟೀಕಿಸುವ ನಿರ್ಣಯವನ್ನು ತಡೆಯಲು ಇರಾನ್ ಸಹಾಯ ಮಾಡಿತ್ತು” ಎಂದು ತಿಳಿಸಿದ್ದಾರೆ.

“ವಾಸ್ತವವಾಗಿ, ಇಸ್ಲಾಮಿಕ್ ಗಣರಾಜ್ಯ ಇರಾನ್ ಭಾರತದೊಂದಿಗೆ ಹೆಚ್ಚು ಸಹಕಾರಿಯಾಗಿದೆ. ಅದರ ಪೂರ್ವವರ್ತಿ ಇರಾನ್ ಸಾಮ್ರಾಜ್ಯಶಾಹಿ ರಾಜ್ಯವು 1965 ಮತ್ತು 1971 ರ ಯುದ್ಧಗಳಲ್ಲಿ ಪಾಕಿಸ್ತಾನದ ಕಡೆಗೆ ವಾಲಿತ್ತು” ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಸಂಬಂಧಗಳನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, “ಈ ವಿಶಿಷ್ಟ ಸ್ಥಾನವು ನಮ್ಮ ದೇಶಕ್ಕೆ ನೈತಿಕ ಜವಾಬ್ದಾರಿ ಮತ್ತು ರಾಜತಾಂತ್ರಿಕ ಚೌಕಟ್ಟನ್ನು ಒದಗಿಸುತ್ತದೆ. ಇದು ಉದ್ವಿಗ್ನತೆ ಮತ್ತು ಶಾಂತಿಗೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದ್ದಾರೆ.

“ಇದು ಕೇವಲ ಅಮೂರ್ತ ತತ್ವವಲ್ಲ. ಲಕ್ಷಾಂತರ ಭಾರತೀಯ ನಾಗರಿಕರು ಪಶ್ಚಿಮ ಏಷ್ಯಾದಾದ್ಯಂತ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಇದು ಈ ಪ್ರದೇಶದಲ್ಲಿ ಶಾಂತಿಯನ್ನು ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿಷಯವನ್ನಾಗಿ ಮಾಡುತ್ತದೆ.”

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...