Homeಮುಖಪುಟಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

- Advertisement -
- Advertisement -

ಗಾಝಾ ಮತ್ತು ಇರಾನ್ ಮೇಲಿನ ಇಸ್ರೇಲ್ ಆಕ್ರಮಣದ ಬಗ್ಗೆ ಭಾರತದ ಮೌನವು “ತನ್ನ ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿಯೂ ಆಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

“ಭಾರತದ ಧ್ವನಿ ಕೇಳಲು ಇನ್ನೂ ತಡವಾಗಿಲ್ಲ” ಎಂಬ ಲೇಖನದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಸೋನಿಯಾ ಗಾಂಧಿ, ಮೋದಿ ಸರ್ಕಾರವು ಇಸ್ರೇಲ್ ಜೊತೆಗೆ ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಕಲ್ಪಿಸಿಕೊಳ್ಳುವ ಶಾಂತಿಯುತ ದ್ವಿರಾಷ್ಟ್ರ ಪರಿಹಾರದ ಕುರಿತು ಭಾರತದ ದೀರ್ಘಕಾಲೀನ ಬದ್ಧತೆಯನ್ನು ಕೈಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕದ ಅಂತ್ಯವಿಲ್ಲದ ಯುದ್ಧಗಳ ವಿರುದ್ಧ ಮಾತನಾಡಿದ ಸೋನಿಯಾ ಗಾಂಧಿ, ಪಶ್ಚಿಮ ಏಷ್ಯಾದಲ್ಲಿ ‘ವಿನಾಶಕಾರಿ ಮಾರ್ಗ’ ಅನುಸರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಲೇಖನದಲ್ಲಿ ಟೀಕಿಸಿದ್ದಾರೆ.

“ಗಾಝಾದಲ್ಲಿನ ವಿನಾಶದ ಬಗ್ಗೆ ಮತ್ತು ಈಗ ಇರಾನ್ ವಿರುದ್ಧದ ಅಪ್ರಚೋದಿತ ದಾಳಿ ಬಗ್ಗೆ ಹೊಸದಿಲ್ಲಿಯ ಮೌನವು ನಮ್ಮ ನೈತಿಕ ಮತ್ತು ರಾಜತಾಂತ್ರಿಕ ಸಂಪ್ರದಾಯಗಳಿಂದ ಕಳವಳಕಾರಿ ನಿರ್ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಧ್ವನಿಯ ನಷ್ಟ ಮಾತ್ರವಲ್ಲ, ಬದಲಾಗಿ, ಮೌಲ್ಯಗಳ ಶರಣಾಗತಿಯೂ ಹೌದು” ಎಂದು ‘ದಿ ಹಿಂದೂ’ ದಲ್ಲಿನ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.

“ಇನ್ನೂ ತಡವಾಗಿಲ್ಲ. ಭಾರತವು ಸ್ಪಷ್ಟವಾಗಿ ಮಾತನಾಡಬೇಕು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಪರಸ್ಪಪರ ಮಾತುಕತೆಗೆ ಮರಳಲು ಉತ್ತೇಜಿಸಲು ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ಈ ಮಾನವೀಯ ದುರಂತದ ಸಂದರ್ಭದಲ್ಲಿ, “ನರೇಂದ್ರ ಮೋದಿ ಸರ್ಕಾರವು ಶಾಂತಿಯುತ ದ್ವಿ-ರಾಷ್ಟ್ರ ಪರಿಹಾರದ ಕುರಿತಂತೆ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ಬದ್ಧತೆಯನ್ನು ಬಹುತೇಕ ಕೈಬಿಟ್ಟಿದೆ, ದ್ವಿ-ರಾಷ್ಟ್ರ ಪರಿಹಾರವು ಸಾರ್ವಭೌಮ, ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಇಸ್ರೇಲ್ ಜೊತೆ ಪರಸ್ಪರ ಭದ್ರತೆ ಮತ್ತು ಘನತೆಯಿಂದ ಬದುಕುವ ಕಲ್ಪನೆಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಜೂನ್ 13, 2025 ರಂದು, ಇಸ್ರೇಲ್ ಇರಾನ್ ಮತ್ತು ಅದರ ಸಾರ್ವಭೌಮತ್ವದ ವಿರುದ್ಧ ತೊಂದರೆ ಕೊಡುವ ಮತ್ತು ಕಾನೂನುಬಾಹಿರ ದಾಳಿಯನ್ನು ಪ್ರಾರಂಭಿಸಿದ ಬಳಿಕ ಏಕಪಕ್ಷೀಯ ಮಿಲಿಟರಿಸಂನ ಅಪಾಯಕಾರಿ ಪರಿಣಾಮಗಳನ್ನು ಜಗತ್ತು ಮತ್ತೊಮ್ಮೆ ಕಂಡಿದೆ ಎಂದು ಸೋನಿಯಾ ಗಾಂಧಿ ಬೊಟ್ಟು ಮಾಡಿದ್ದಾರೆ.

ಇರಾನ್ ನೆಲದಲ್ಲಿ ನಡೆದ ಈ ಬಾಂಬ್ ದಾಳಿಗಳು ಮತ್ತು ಗುರಿಯಿಟ್ಟು ನಡೆದ ಹತ್ಯೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸಿದೆ. ಇದು ಗಂಭೀರ ಪ್ರಾದೇಶಿಕ ಮತ್ತು ಜಾಗತಿಕ ಪರಿಣಾಮಗಳೊಂದಿಗೆ ಅಪಾಯಕಾರಿ ಅಸ್ತಿರತೆಯನ್ನು ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಗಾಝಾದಲ್ಲಿ ಕ್ರೂರ ಆಕ್ರಮಣ ಸೇರಿದಂತೆ ಇಸ್ರೇಲ್‌ನ ಇತ್ತೀಚಿನ ಹಲವು ಕ್ರಮಗಳಂತೆ, ಈ ಕಾರ್ಯಾಚರಣೆಯನ್ನು ನಾಗರಿಕ ಜೀವನ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ನಡೆಸಲಾಗಿದೆ. ಈ ಕ್ರಮಗಳು ಅಸ್ಥಿರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಮತ್ತಷ್ಟು ಸಂಘರ್ಷದ ಬೀಜಗಳನ್ನು ಬಿತ್ತುತ್ತದೆ” ಎಂದಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಪ್ರಸ್ತುತ ಇಸ್ರೇಲಿ ನಾಯಕತ್ವವು “ಶಾಂತಿಯನ್ನು ದುರ್ಬಲಗೊಳಿಸುವ ಮತ್ತು ಉಗ್ರವಾದವನ್ನು ಪೋಷಿಸುವ ದೀರ್ಘ ಮತ್ತು ದುರದೃಷ್ಟಕರ ದಾಖಲೆಯನ್ನು ಹೊಂದಿದೆ” ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ದಾಖಲೆಯನ್ನು ಗಮನಿಸಿದರೆ, “ನೆತನ್ಯಾಹು ಅವರು ಒಪ್ಪಂದಕ್ಕಿಂತ ಉದ್ವಿಗ್ನತೆಯನ್ನು ಹೆಚ್ಚಿಸಿಕೊಳ್ಳುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

ಅಮೆರಿಕ ಅಧ್ಯಕ್ಷರನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಜೂನ್ 17 ರಂದು ತನ್ನ ಸ್ವಂತ ಗುಪ್ತಚರ ಮುಖ್ಯಸ್ಥರ ಮೌಲ್ಯಮಾಪನವನ್ನು ತಳ್ಳಿಹಾಕಿ, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲು ತುಂಬಾ ಹತ್ತಿರದಲ್ಲಿದೆ ಎಂದು ಟ್ರಂಪ್ ಹೇಳಿರುವುದು ತೀವ್ರ ನಿರಾಶಾದಾಯಕ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಗತ್ತು ನಿರೀಕ್ಷಿಸುತ್ತಿರುವುದು ಮತ್ತು ಜಗತ್ತಿಗೆ ಬೇಕಾಗಿರುವುದು ಸತ್ಯಗಳನ್ನು ಆಧರಿಸಿದ ರಾಜತಾಂತ್ರಿಕತೆಯಿಂದ ದೇಶ ನಡೆಸಲ್ಪಡುವ ನಾಯಕತ್ವ ಆಗಿದೆ. ಅಲ್ಲದೆ, ಬಲವಂತ ಅಥವಾ ಸುಳ್ಳುಗಳಿಂದಲ್ಲ ದೇಶ ನಡೆಸುವವರು ಅಲ್ಲ. ಇರಾನ್ ಭಾರತದ ದೀರ್ಘಕಾಲದ ಸ್ನೇಹಿತನಾಗಿದ್ದು, ದೊಡ್ಡ ಮಟ್ಟದ ನಾಗರಿಕ ಸಂಬಂಧಗಳೊಂದಿಗೆ ಅದು ನಮ್ಮೊಂದಿಗೆ ಇದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಂದರ್ಭಗಳಲ್ಲಿ ಭಾರತಕ್ಕೆ ದೃಢ ಬೆಂಬಲ ನೀಡಿದ ಇತಿಹಾಸ ಇರಾನ್‌ಗೆ ಇದೆ. 1994 ರಲ್ಲಿ, ಕಾಶ್ಮೀರ ವಿಷಯದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತವನ್ನು ಟೀಕಿಸುವ ನಿರ್ಣಯವನ್ನು ತಡೆಯಲು ಇರಾನ್ ಸಹಾಯ ಮಾಡಿತ್ತು” ಎಂದು ತಿಳಿಸಿದ್ದಾರೆ.

“ವಾಸ್ತವವಾಗಿ, ಇಸ್ಲಾಮಿಕ್ ಗಣರಾಜ್ಯ ಇರಾನ್ ಭಾರತದೊಂದಿಗೆ ಹೆಚ್ಚು ಸಹಕಾರಿಯಾಗಿದೆ. ಅದರ ಪೂರ್ವವರ್ತಿ ಇರಾನ್ ಸಾಮ್ರಾಜ್ಯಶಾಹಿ ರಾಜ್ಯವು 1965 ಮತ್ತು 1971 ರ ಯುದ್ಧಗಳಲ್ಲಿ ಪಾಕಿಸ್ತಾನದ ಕಡೆಗೆ ವಾಲಿತ್ತು” ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಸಂಬಂಧಗಳನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, “ಈ ವಿಶಿಷ್ಟ ಸ್ಥಾನವು ನಮ್ಮ ದೇಶಕ್ಕೆ ನೈತಿಕ ಜವಾಬ್ದಾರಿ ಮತ್ತು ರಾಜತಾಂತ್ರಿಕ ಚೌಕಟ್ಟನ್ನು ಒದಗಿಸುತ್ತದೆ. ಇದು ಉದ್ವಿಗ್ನತೆ ಮತ್ತು ಶಾಂತಿಗೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದ್ದಾರೆ.

“ಇದು ಕೇವಲ ಅಮೂರ್ತ ತತ್ವವಲ್ಲ. ಲಕ್ಷಾಂತರ ಭಾರತೀಯ ನಾಗರಿಕರು ಪಶ್ಚಿಮ ಏಷ್ಯಾದಾದ್ಯಂತ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಇದು ಈ ಪ್ರದೇಶದಲ್ಲಿ ಶಾಂತಿಯನ್ನು ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿಷಯವನ್ನಾಗಿ ಮಾಡುತ್ತದೆ.”

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...