Homeಮುಖಪುಟರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಶಾಸನಬದ್ಧವಾಗಿ ಕಾನೂನು ಖಾತರಿ ಹಾಗೂ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಮರಣಹೊಂದಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷದ ನಾಯಕಿ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬುಧವಾರ ಬೆಳಗ್ಗೆ ನಡೆದ ಸಂಸದೀಯ ಸಭೆಯಲ್ಲಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರೈತರ ಬೇಡಿಕೆಗಳನ್ನು ತಮ್ಮ ಪಕ್ಷವು ಬೆಂಬಲಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತಪಡಿಸುವಲ್ಲಿ ಆಡಳಿತಾರೂಢ ಪಕ್ಷವು ವಿಫಲವಾಗಿದೆ ಎಂದು ಬಿಜೆಪಿ ಪಕ್ಷವನ್ನು ಟೀಕಿಸಿದ ಸೋನಿಯಾ ಗಾಂಧಿ, ಕೃಷಿ ವಲಯ ಎದುರಿಸುತ್ತಿರುವ ಸವಾಲುಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ನಮ್ಮ ಪಕ್ಷ ಒತ್ತಾಯಿಸುತ್ತದೆ ಎಂದಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಅಭಿನಂದಿಸಿದ ಸೋನಿಯಾ, ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ, ರೈತರು ಬೆಳೆದ ಬೆಳೆಗೆ ಕೃಷಿ ವೆಚ್ಚವನ್ನು ಪೂರೈಸುವ ಲಾಭದಾಯಕ ಬೆಲೆ ಹಾಗೂ ದುಖಿಃತ ಕುಟುಂಬಗಳಿಗೆ ಪರಿಹಾರ… ರೈತರ ಈ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಕಳೆದ ಹದಿನೈದು ತಿಂಗಳಿನಿಂದ ‘ಶಿಸ್ತು ಮತ್ತು ಸಮರ್ಪಣೆ’ ಭಾವದಿಂದ ಸಾವಿರಾರು ರೈತರು ಕರಾಳ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ಹಿಂತೆಗೆದುಕೊಳ್ಳುವಂತೆ ಪ್ರತಿಭಟಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಕ್ಷಮೆ ಕೋರುವ ಮೂಲಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೂ ಅಂಗೀಕಾರ ದೊರೆತಿದೆ. ಆದರೆ ಎಂಎಸ್‌ಪಿಗೆ ಕಾನೂನು ಖಾತರಿ ಹಾಗೂ ಇತರೆ ಬೇಡಿಕೆಗಳನ್ನು ಇನ್ನೂ ಬಾಕಿ ಇರುವ ಕಾರಣ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ.
ರೈತರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ, ಎಂಎಸ್ಪಿಗೆ ಕಾನೂನು ಖಾತರಿಯನ್ನು ಸಂಪೂರ್ಣವಾಗಿ ಪರಿಗಣಿಸಲಾಗುವುದು ಎಂದು ಲಿಖಿತ ಭರವಸೆ ನೀಡಲು ಸಿದ್ಧ ಎಂದು ನಿನ್ನೆ ಹೇಳಿದೆ. ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ಮುಖಂಡರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ.

ಬೆಲೆ ಏರಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸೋನಿಯಾ ಗಾಂಧಿ, ‘ಮೋದಿ ಸರ್ಕಾರವು ಹೇಗೆ ಮತ್ತು ಏಕೆ ಇಷ್ಟೊಂದು ಸಂವೇದನಾಶೀಲತೆಯೇ ಇಲ್ಲದಂತೆ ನಡೆದುಕೊಳ್ಳುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಈ ಸಂಕಷ್ಟಗಳು ಜನರಿಗೆ ನುಂಗಲಾರದ ತುತ್ತಾಗಿವೆ. ಪೆಟ್ರೊಲ್‌, ಡೀಸೆಲ್‌ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರವು ಇತ್ತೀಚೆಗೆ ತೆಗೆದುಕೊಂಡ ಕ್ರಮಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ’ ಎಂದರು.

ಕೊರೊನಾ ತಂದೊಡ್ಡಿದ ಸಮಸ್ಯೆಗಳಿಂದ ಹೊರಬರಲು ಹೆಣಗಾಡುತ್ತಿರುವ ಜನರಿಗೆ ಬೆಲೆ ಏರಿಕೆ ಬಿಸಿ ಬರಸಿಡಿಲಿನಂತಾಗಿದೆ. ಪ್ರತಿನಿತ್ಯದ ಬಳಕೆಯ ವಸ್ತು, ತರಕಾರಿ ಬೆಲೆಗಳು ಗಗನಕ್ಕೇರಿವೆ. ಗ್ಯಾಸ್‌ ಬೆಲೆ ಒಂದೇ ವರ್ಷದಲ್ಲಿ ದುಪ್ಪಟ್ಟಾಗಿದೆ. ಪೆಟ್ರೊಲ್ ಡೀಸೆಲ್‌ ಬೆಲೆ ಜನಸಾಮಾನ್ಯರಿಗೆ ಬಿಸಿತುಪ್ಪದಂತಾಗಿದೆ. ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳು ಜನರನ್ನು ಮಾನಸಿಕವಾಗಿ ದೈಹಿಕವಾಗಿ ಹೈರಾಣವಾಗಿಸಿವೆ. ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಂಡು ಬೆಲೆ ಇಳಿಸಬೇಕಾಗಿದೆ.


ಇದನ್ನೂ ಓದಿ; ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...