Homeಮುಖಪುಟರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಶಾಸನಬದ್ಧವಾಗಿ ಕಾನೂನು ಖಾತರಿ ಹಾಗೂ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಮರಣಹೊಂದಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷದ ನಾಯಕಿ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬುಧವಾರ ಬೆಳಗ್ಗೆ ನಡೆದ ಸಂಸದೀಯ ಸಭೆಯಲ್ಲಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರೈತರ ಬೇಡಿಕೆಗಳನ್ನು ತಮ್ಮ ಪಕ್ಷವು ಬೆಂಬಲಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತಪಡಿಸುವಲ್ಲಿ ಆಡಳಿತಾರೂಢ ಪಕ್ಷವು ವಿಫಲವಾಗಿದೆ ಎಂದು ಬಿಜೆಪಿ ಪಕ್ಷವನ್ನು ಟೀಕಿಸಿದ ಸೋನಿಯಾ ಗಾಂಧಿ, ಕೃಷಿ ವಲಯ ಎದುರಿಸುತ್ತಿರುವ ಸವಾಲುಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ನಮ್ಮ ಪಕ್ಷ ಒತ್ತಾಯಿಸುತ್ತದೆ ಎಂದಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಅಭಿನಂದಿಸಿದ ಸೋನಿಯಾ, ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ, ರೈತರು ಬೆಳೆದ ಬೆಳೆಗೆ ಕೃಷಿ ವೆಚ್ಚವನ್ನು ಪೂರೈಸುವ ಲಾಭದಾಯಕ ಬೆಲೆ ಹಾಗೂ ದುಖಿಃತ ಕುಟುಂಬಗಳಿಗೆ ಪರಿಹಾರ… ರೈತರ ಈ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಕಳೆದ ಹದಿನೈದು ತಿಂಗಳಿನಿಂದ ‘ಶಿಸ್ತು ಮತ್ತು ಸಮರ್ಪಣೆ’ ಭಾವದಿಂದ ಸಾವಿರಾರು ರೈತರು ಕರಾಳ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ಹಿಂತೆಗೆದುಕೊಳ್ಳುವಂತೆ ಪ್ರತಿಭಟಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಕ್ಷಮೆ ಕೋರುವ ಮೂಲಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೂ ಅಂಗೀಕಾರ ದೊರೆತಿದೆ. ಆದರೆ ಎಂಎಸ್‌ಪಿಗೆ ಕಾನೂನು ಖಾತರಿ ಹಾಗೂ ಇತರೆ ಬೇಡಿಕೆಗಳನ್ನು ಇನ್ನೂ ಬಾಕಿ ಇರುವ ಕಾರಣ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ.
ರೈತರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ, ಎಂಎಸ್ಪಿಗೆ ಕಾನೂನು ಖಾತರಿಯನ್ನು ಸಂಪೂರ್ಣವಾಗಿ ಪರಿಗಣಿಸಲಾಗುವುದು ಎಂದು ಲಿಖಿತ ಭರವಸೆ ನೀಡಲು ಸಿದ್ಧ ಎಂದು ನಿನ್ನೆ ಹೇಳಿದೆ. ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ಮುಖಂಡರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ.

ಬೆಲೆ ಏರಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸೋನಿಯಾ ಗಾಂಧಿ, ‘ಮೋದಿ ಸರ್ಕಾರವು ಹೇಗೆ ಮತ್ತು ಏಕೆ ಇಷ್ಟೊಂದು ಸಂವೇದನಾಶೀಲತೆಯೇ ಇಲ್ಲದಂತೆ ನಡೆದುಕೊಳ್ಳುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಈ ಸಂಕಷ್ಟಗಳು ಜನರಿಗೆ ನುಂಗಲಾರದ ತುತ್ತಾಗಿವೆ. ಪೆಟ್ರೊಲ್‌, ಡೀಸೆಲ್‌ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರವು ಇತ್ತೀಚೆಗೆ ತೆಗೆದುಕೊಂಡ ಕ್ರಮಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ’ ಎಂದರು.

ಕೊರೊನಾ ತಂದೊಡ್ಡಿದ ಸಮಸ್ಯೆಗಳಿಂದ ಹೊರಬರಲು ಹೆಣಗಾಡುತ್ತಿರುವ ಜನರಿಗೆ ಬೆಲೆ ಏರಿಕೆ ಬಿಸಿ ಬರಸಿಡಿಲಿನಂತಾಗಿದೆ. ಪ್ರತಿನಿತ್ಯದ ಬಳಕೆಯ ವಸ್ತು, ತರಕಾರಿ ಬೆಲೆಗಳು ಗಗನಕ್ಕೇರಿವೆ. ಗ್ಯಾಸ್‌ ಬೆಲೆ ಒಂದೇ ವರ್ಷದಲ್ಲಿ ದುಪ್ಪಟ್ಟಾಗಿದೆ. ಪೆಟ್ರೊಲ್ ಡೀಸೆಲ್‌ ಬೆಲೆ ಜನಸಾಮಾನ್ಯರಿಗೆ ಬಿಸಿತುಪ್ಪದಂತಾಗಿದೆ. ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳು ಜನರನ್ನು ಮಾನಸಿಕವಾಗಿ ದೈಹಿಕವಾಗಿ ಹೈರಾಣವಾಗಿಸಿವೆ. ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಂಡು ಬೆಲೆ ಇಳಿಸಬೇಕಾಗಿದೆ.


ಇದನ್ನೂ ಓದಿ; ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....