Homeಮುಖಪುಟರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ರೈತ ಹೋರಾಟಕ್ಕೆ ಬೆಂಬಲ: ಬೆಲೆ ಏರಿಕೆ ಕುರಿತು ಕೇಂದ್ರದ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಶಾಸನಬದ್ಧವಾಗಿ ಕಾನೂನು ಖಾತರಿ ಹಾಗೂ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಮರಣಹೊಂದಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ ಪಕ್ಷದ ನಾಯಕಿ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬುಧವಾರ ಬೆಳಗ್ಗೆ ನಡೆದ ಸಂಸದೀಯ ಸಭೆಯಲ್ಲಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರೈತರ ಬೇಡಿಕೆಗಳನ್ನು ತಮ್ಮ ಪಕ್ಷವು ಬೆಂಬಲಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತಪಡಿಸುವಲ್ಲಿ ಆಡಳಿತಾರೂಢ ಪಕ್ಷವು ವಿಫಲವಾಗಿದೆ ಎಂದು ಬಿಜೆಪಿ ಪಕ್ಷವನ್ನು ಟೀಕಿಸಿದ ಸೋನಿಯಾ ಗಾಂಧಿ, ಕೃಷಿ ವಲಯ ಎದುರಿಸುತ್ತಿರುವ ಸವಾಲುಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ನಮ್ಮ ಪಕ್ಷ ಒತ್ತಾಯಿಸುತ್ತದೆ ಎಂದಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಅಭಿನಂದಿಸಿದ ಸೋನಿಯಾ, ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ, ರೈತರು ಬೆಳೆದ ಬೆಳೆಗೆ ಕೃಷಿ ವೆಚ್ಚವನ್ನು ಪೂರೈಸುವ ಲಾಭದಾಯಕ ಬೆಲೆ ಹಾಗೂ ದುಖಿಃತ ಕುಟುಂಬಗಳಿಗೆ ಪರಿಹಾರ… ರೈತರ ಈ ಬೇಡಿಕೆಗಳನ್ನು ನಾವು ಬೆಂಬಲಿಸುತ್ತೇವೆ. ಕಳೆದ ಹದಿನೈದು ತಿಂಗಳಿನಿಂದ ‘ಶಿಸ್ತು ಮತ್ತು ಸಮರ್ಪಣೆ’ ಭಾವದಿಂದ ಸಾವಿರಾರು ರೈತರು ಕರಾಳ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರವು ಹಿಂತೆಗೆದುಕೊಳ್ಳುವಂತೆ ಪ್ರತಿಭಟಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳು ಕ್ಷಮೆ ಕೋರುವ ಮೂಲಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಇತ್ತೀಚೆಗಷ್ಟೆ ಸಂಸತ್ತಿನಲ್ಲಿಯೂ ಕೃಷಿ ಕಾನೂನುಗಳ ರದ್ದತಿ ಮಸೂದೆಗೂ ಅಂಗೀಕಾರ ದೊರೆತಿದೆ. ಆದರೆ ಎಂಎಸ್‌ಪಿಗೆ ಕಾನೂನು ಖಾತರಿ ಹಾಗೂ ಇತರೆ ಬೇಡಿಕೆಗಳನ್ನು ಇನ್ನೂ ಬಾಕಿ ಇರುವ ಕಾರಣ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ.
ರೈತರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ, ಎಂಎಸ್ಪಿಗೆ ಕಾನೂನು ಖಾತರಿಯನ್ನು ಸಂಪೂರ್ಣವಾಗಿ ಪರಿಗಣಿಸಲಾಗುವುದು ಎಂದು ಲಿಖಿತ ಭರವಸೆ ನೀಡಲು ಸಿದ್ಧ ಎಂದು ನಿನ್ನೆ ಹೇಳಿದೆ. ಈ ಪ್ರಸ್ತಾಪದ ಕುರಿತು ಚರ್ಚಿಸಲು ರೈತ ಮುಖಂಡರು ಇಂದು ಬೆಳಿಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆ.

ಬೆಲೆ ಏರಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸೋನಿಯಾ ಗಾಂಧಿ, ‘ಮೋದಿ ಸರ್ಕಾರವು ಹೇಗೆ ಮತ್ತು ಏಕೆ ಇಷ್ಟೊಂದು ಸಂವೇದನಾಶೀಲತೆಯೇ ಇಲ್ಲದಂತೆ ನಡೆದುಕೊಳ್ಳುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಈ ಸಂಕಷ್ಟಗಳು ಜನರಿಗೆ ನುಂಗಲಾರದ ತುತ್ತಾಗಿವೆ. ಪೆಟ್ರೊಲ್‌, ಡೀಸೆಲ್‌ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರವು ಇತ್ತೀಚೆಗೆ ತೆಗೆದುಕೊಂಡ ಕ್ರಮಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ’ ಎಂದರು.

ಕೊರೊನಾ ತಂದೊಡ್ಡಿದ ಸಮಸ್ಯೆಗಳಿಂದ ಹೊರಬರಲು ಹೆಣಗಾಡುತ್ತಿರುವ ಜನರಿಗೆ ಬೆಲೆ ಏರಿಕೆ ಬಿಸಿ ಬರಸಿಡಿಲಿನಂತಾಗಿದೆ. ಪ್ರತಿನಿತ್ಯದ ಬಳಕೆಯ ವಸ್ತು, ತರಕಾರಿ ಬೆಲೆಗಳು ಗಗನಕ್ಕೇರಿವೆ. ಗ್ಯಾಸ್‌ ಬೆಲೆ ಒಂದೇ ವರ್ಷದಲ್ಲಿ ದುಪ್ಪಟ್ಟಾಗಿದೆ. ಪೆಟ್ರೊಲ್ ಡೀಸೆಲ್‌ ಬೆಲೆ ಜನಸಾಮಾನ್ಯರಿಗೆ ಬಿಸಿತುಪ್ಪದಂತಾಗಿದೆ. ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿಗಳು ಜನರನ್ನು ಮಾನಸಿಕವಾಗಿ ದೈಹಿಕವಾಗಿ ಹೈರಾಣವಾಗಿಸಿವೆ. ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಂಡು ಬೆಲೆ ಇಳಿಸಬೇಕಾಗಿದೆ.


ಇದನ್ನೂ ಓದಿ; ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...