Homeಮುಖಪುಟಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸೋನಿಯಾ ಗಾಂಧಿಯವರ ವಾಗ್ದಾಳಿ ಬಳಿಕ ವಿವಾದಾತ್ಮಕ ಪ್ರಶ್ನೆಯನ್ನು ಕೈಬಿಟ್ಟ ಸಿಬಿಎಸ್‌ಇ

- Advertisement -
- Advertisement -

ಸ್ತ್ರಿ ದ್ವೇಷದಿಂದ ಕೂಡಿದ ಪ್ರಶ್ನೆಯನ್ನು 10ನೇ ತರಗತಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸಿಬಿಎಸ್‌ಇ (ಸೆಂಟ್ರಲ್‌ ಬೋರ್ಡ್ ಆಫ್‌ ಸೆಕೆಂಡರಿ ಎಜುಕೇಷನ್‌) ಕೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವಿವಾದವು ಸಂಸತ್ತಿನಲ್ಲಿ ಮಾರ್ಧನಿಸಿದ್ದು ಸಿಬಿಎಸ್‌ಇ ಪ್ರಮಾದವನ್ನು ಒಪ್ಪಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಂಸತ್ತಿನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಬಳಿಕ, “ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದ ಪ್ಯಾಸೇಜ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಹೀಗಾಗಿ ಈ ಪ್ಯಾಸೇಜ್ ಕೈಬಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳಿಗೆ ಪೂರ್ಣ ಅಂಕಗಳನ್ನು ನೀಡಲಾಗುತ್ತದೆ” ಎಂದು ಸಿಬಿಎಸ್‌ಇ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಾಕ್ಯದಲ್ಲಿ ‘ಹೆಂಡತಿಯ ವಿಮೋಚನೆ ಮಕ್ಕಳ ಮೇಲಿನ ಪೋಷಕರ ಅಧಿಕಾರವನ್ನು ನಾಶಪಡಿಸಿತು’, ‘ಗಂಡನ ಮಾರ್ಗವನ್ನು ಒಪ್ಪಿಕೊಂಡರೆ ಮಾತ್ರ ತಾಯಿ, ಕಿರಿಯರ ಮೇಲೆ ವಿಧೇಯತೆಯನ್ನು ಹೊಂದಬಹುದು’ ಎಂಬ ವಾಕ್ಯಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

“ಪುರುಷನನ್ನು ಆತನ ಸ್ಥಾನದಿಂದ ಕೆಳಗಿಳಿಸಿ ಹೆಂಡತಿ ಮತ್ತು ತಾಯಿ ತನ್ನನ್ನು ತಾನೇ ವಂಚನೆ ಮಾಡಿಕೊಂಡರು”, ಇನ್ನೊಂದು ಭಾಗದಲ್ಲಿ, “ಸ್ವಾತಂತ್ರ್ಯವನ್ನು ಗಳಿಸುವುದು ವಿವಿಧ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಗೆ ಮುಖ್ಯ ಕಾರಣ”, “ಹೆಂಡತಿಯರು ತಮ್ಮ ಗಂಡನನ್ನು ಅನುಸರಿಸುವುದನ್ನು ನಿಲ್ಲಿಸಿದರು. ಹೀಗಾಗಿ ಮಕ್ಕಳು ಮತ್ತು ಸೇವಕರು ಅಶಿಸ್ತು ಪಾಲಿಸುತ್ತಿದ್ದಾರೆ” ಎಂಬ ಸಾಲುಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

ಈ ರೀತಿಯ ವಾಕ್ಯಗಳನ್ನು ಸಂಸತ್ತಿನಲ್ಲಿ ವಿವಿಧ ಪಕ್ಷಗಳು ಪ್ರಶ್ನಿಸಿದ್ದು, “ಇದು ಕಠಿಣ ಸ್ತ್ರೀದ್ವೇಷ” ಮತ್ತು “ಅಸಹ್ಯ” ಎಂದು ಪ್ರತಿಪಾದಿಸಿದವು.

ಕಾಂಗ್ರೆಸ್ ನೇತೃತ್ವದಲ್ಲಿ, ಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಲೋಕಸಭೆಯಲ್ಲಿ ಈ ವಿಷಯವಾಗಿ ಸಭಾ ತ್ಯಾಗ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಪ್ರಚಂಡ ಸ್ತ್ರೀದ್ವೇಷ” ಎಂದು ಬಣ್ಣಿಸಿದರು. “ನರೇಂದ್ರ ಮೋದಿ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಕ್ಷೇಪಾರ್ಹ ಪ್ರಶ್ನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಗಂಭೀರ ಲೋಪಕ್ಕೆ ಕಾರಣವಾದವರ ಮೇಲೆ ಪರಿಶೀಲನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಸಿಬಿಎಸ್‌ಇ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿರುವ ಅವರು “ಯುವಜನರ ನೈತಿಕತೆ ಮತ್ತು ಭವಿಷ್ಯವನ್ನು ಹತ್ತಿಕ್ಕುವ ಆರ್‌ಎಸ್‌ಎಸ್-ಬಿಜೆಪಿ ತಂತ್ರವಿದು” ಎಂದು ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಈ ಬೆಳವಣಿಗೆಯನ್ನು ಪ್ರಶ್ನಿಸಿದ್ದಾರೆ. “ನಂಬಲಾಗುತ್ತಿಲ್ಲ! ನಾವು ನಿಜವಾಗಿಯೂ ಮಕ್ಕಳಿಗೆ ಈ ಪ್ರೇರಣೆಯನ್ನು ಕಲಿಸುತ್ತಿದ್ದೇವೆಯೇ? ಸ್ಪಷ್ಟವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಮೇಲಿನ ಈ ಹಿಮ್ಮುಖ ದೃಷ್ಟಿಕೋನಗಳನ್ನು ಅನುಮೋದಿಸುತ್ತದೆ, ಇಲ್ಲದಿದ್ದರೆ ಅವರು CBSE ಪಠ್ಯಕ್ರಮದಲ್ಲಿ ಏಕೆ ಕಾಣಿಸಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...