Homeಮುಖಪುಟಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸಿಬಿಎಸ್‌ಇ ಪ್ರಶ್ನೆಪತ್ರಿಕೆಯಲ್ಲಿ ಸ್ತ್ರೀದ್ವೇಷ: ಸಂಸತ್ತಿನಲ್ಲಿ ಸೋನಿಯಾ ಗಾಂಧಿ ಕಿಡಿ

ಸೋನಿಯಾ ಗಾಂಧಿಯವರ ವಾಗ್ದಾಳಿ ಬಳಿಕ ವಿವಾದಾತ್ಮಕ ಪ್ರಶ್ನೆಯನ್ನು ಕೈಬಿಟ್ಟ ಸಿಬಿಎಸ್‌ಇ

- Advertisement -
- Advertisement -

ಸ್ತ್ರಿ ದ್ವೇಷದಿಂದ ಕೂಡಿದ ಪ್ರಶ್ನೆಯನ್ನು 10ನೇ ತರಗತಿ ಇಂಗ್ಲಿಷ್ ಪರೀಕ್ಷೆಯಲ್ಲಿ ಸಿಬಿಎಸ್‌ಇ (ಸೆಂಟ್ರಲ್‌ ಬೋರ್ಡ್ ಆಫ್‌ ಸೆಕೆಂಡರಿ ಎಜುಕೇಷನ್‌) ಕೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವಿವಾದವು ಸಂಸತ್ತಿನಲ್ಲಿ ಮಾರ್ಧನಿಸಿದ್ದು ಸಿಬಿಎಸ್‌ಇ ಪ್ರಮಾದವನ್ನು ಒಪ್ಪಿಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸಂಸತ್ತಿನಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಬಳಿಕ, “ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದ್ದ ಪ್ಯಾಸೇಜ್‌ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ. ಹೀಗಾಗಿ ಈ ಪ್ಯಾಸೇಜ್ ಕೈಬಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳಿಗೆ ಪೂರ್ಣ ಅಂಕಗಳನ್ನು ನೀಡಲಾಗುತ್ತದೆ” ಎಂದು ಸಿಬಿಎಸ್‌ಇ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಾಕ್ಯದಲ್ಲಿ ‘ಹೆಂಡತಿಯ ವಿಮೋಚನೆ ಮಕ್ಕಳ ಮೇಲಿನ ಪೋಷಕರ ಅಧಿಕಾರವನ್ನು ನಾಶಪಡಿಸಿತು’, ‘ಗಂಡನ ಮಾರ್ಗವನ್ನು ಒಪ್ಪಿಕೊಂಡರೆ ಮಾತ್ರ ತಾಯಿ, ಕಿರಿಯರ ಮೇಲೆ ವಿಧೇಯತೆಯನ್ನು ಹೊಂದಬಹುದು’ ಎಂಬ ವಾಕ್ಯಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

“ಪುರುಷನನ್ನು ಆತನ ಸ್ಥಾನದಿಂದ ಕೆಳಗಿಳಿಸಿ ಹೆಂಡತಿ ಮತ್ತು ತಾಯಿ ತನ್ನನ್ನು ತಾನೇ ವಂಚನೆ ಮಾಡಿಕೊಂಡರು”, ಇನ್ನೊಂದು ಭಾಗದಲ್ಲಿ, “ಸ್ವಾತಂತ್ರ್ಯವನ್ನು ಗಳಿಸುವುದು ವಿವಿಧ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳಿಗೆ ಮುಖ್ಯ ಕಾರಣ”, “ಹೆಂಡತಿಯರು ತಮ್ಮ ಗಂಡನನ್ನು ಅನುಸರಿಸುವುದನ್ನು ನಿಲ್ಲಿಸಿದರು. ಹೀಗಾಗಿ ಮಕ್ಕಳು ಮತ್ತು ಸೇವಕರು ಅಶಿಸ್ತು ಪಾಲಿಸುತ್ತಿದ್ದಾರೆ” ಎಂಬ ಸಾಲುಗಳನ್ನು ಪ್ಯಾಸೇಜ್‌ ಒಳಗೊಂಡಿತ್ತು.

ಈ ರೀತಿಯ ವಾಕ್ಯಗಳನ್ನು ಸಂಸತ್ತಿನಲ್ಲಿ ವಿವಿಧ ಪಕ್ಷಗಳು ಪ್ರಶ್ನಿಸಿದ್ದು, “ಇದು ಕಠಿಣ ಸ್ತ್ರೀದ್ವೇಷ” ಮತ್ತು “ಅಸಹ್ಯ” ಎಂದು ಪ್ರತಿಪಾದಿಸಿದವು.

ಕಾಂಗ್ರೆಸ್ ನೇತೃತ್ವದಲ್ಲಿ, ಡಿಎಂಕೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಸದಸ್ಯರು ಲೋಕಸಭೆಯಲ್ಲಿ ಈ ವಿಷಯವಾಗಿ ಸಭಾ ತ್ಯಾಗ ಮಾಡಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಪ್ರಚಂಡ ಸ್ತ್ರೀದ್ವೇಷ” ಎಂದು ಬಣ್ಣಿಸಿದರು. “ನರೇಂದ್ರ ಮೋದಿ ಸರ್ಕಾರ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಕ್ಷೇಪಾರ್ಹ ಪ್ರಶ್ನೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಗಂಭೀರ ಲೋಪಕ್ಕೆ ಕಾರಣವಾದವರ ಮೇಲೆ ಪರಿಶೀಲನೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಸಿಬಿಎಸ್‌ಇ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ಘಟನೆಯನ್ನು “ಅಸಹ್ಯಕರ” ಎಂದು ಬಣ್ಣಿಸಿರುವ ಅವರು “ಯುವಜನರ ನೈತಿಕತೆ ಮತ್ತು ಭವಿಷ್ಯವನ್ನು ಹತ್ತಿಕ್ಕುವ ಆರ್‌ಎಸ್‌ಎಸ್-ಬಿಜೆಪಿ ತಂತ್ರವಿದು” ಎಂದು ಆರೋಪಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಈ ಬೆಳವಣಿಗೆಯನ್ನು ಪ್ರಶ್ನಿಸಿದ್ದಾರೆ. “ನಂಬಲಾಗುತ್ತಿಲ್ಲ! ನಾವು ನಿಜವಾಗಿಯೂ ಮಕ್ಕಳಿಗೆ ಈ ಪ್ರೇರಣೆಯನ್ನು ಕಲಿಸುತ್ತಿದ್ದೇವೆಯೇ? ಸ್ಪಷ್ಟವಾಗಿ ಬಿಜೆಪಿ ಸರ್ಕಾರವು ಮಹಿಳೆಯರ ಮೇಲಿನ ಈ ಹಿಮ್ಮುಖ ದೃಷ್ಟಿಕೋನಗಳನ್ನು ಅನುಮೋದಿಸುತ್ತದೆ, ಇಲ್ಲದಿದ್ದರೆ ಅವರು CBSE ಪಠ್ಯಕ್ರಮದಲ್ಲಿ ಏಕೆ ಕಾಣಿಸಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿರಿ: ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...