Homeಮುಖಪುಟಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

ಪ್ರಜಾಪ್ರಭುತ್ವದ ಉಳಿವಿಗೆ ಒಗ್ಗಟ್ಟಾಗಿ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು: ಖರ್ಗೆ

- Advertisement -
- Advertisement -

ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಸರ್ವಾಧಿಕಾರಿ ಸರಕಾರವನ್ನು ಉರುಳಿಸಲು ಒಟ್ಟಾಗಬೇಕೆಂದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗ್ರಹಿಸಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಎರಡನೇ ದಿನ, ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹಂತದ ನಾಯಕರು ಮತ್ತು ಕಾರ್ಯಕರ್ತರಲ್ಲಿ  ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಹೇಳಿದ್ದಾರೆ.

ಇದು ನಮಗೆ ವಿಶ್ರಾಂತಿಯ ಸಮಯವಲ್ಲ, ಕಳೆದ 10 ವರ್ಷಗಳಲ್ಲಿ ಬಿಜೆಪಿಯ ಆಡಳಿತದಲ್ಲಿ ಸಾಮಾನ್ಯ ಜನರು ಎದುರಿಸುತ್ತಿರುವ ಸವಾಲುಗಳು ಹೆಚ್ಚಿವೆ. ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನಿರಾಕರಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಒಗ್ಗೂಡಿ ಈ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆ ತರುವಂತಹ ಮಾದ್ಯಮಗಳ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ತಪ್ಪಿಸಿ ಮತ್ತು ಸ್ವಯಂ ಸಂಯಮವನ್ನು ಕಾಪಾಡಿಕೊಳ್ಳುವಂತೆ  ಆಗ್ರಹಿಸಿದ್ದಾರೆ.

ನಾವು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟು ದಣಿವರಿಯಿಲ್ಲದೆ ಕೆಲಸ ಮಾಡಬೇಕು. ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಯಶಸ್ಸಿಗೆ ಆದ್ಯತೆ ನೀಡಬೇಕು. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕ ಮಾತ್ರ ನಮ್ಮ ವಿರೋಧಿಗಳನ್ನು ಸೋಲಿಸಲು ಸಾಧ್ಯ. ಇದು ಕರ್ನಾಟಕದಲ್ಲಿ ಸ್ಪಷ್ಟವಾಗಿದೆ. ನಾವು ಗುರಿ ತಲುಪಲು ಒಗ್ಗಟ್ಟಿನಿಂದ ಇದ್ದೆವು ಮತ್ತು ಶಿಸ್ತಿನಿಂದ ಹೋರಾಡಿದೆವು ಎಂದು ಖರ್ಗೆ ಹೇಳಿದರು.

CWC 39 ಸಾಮಾನ್ಯ ಸದಸ್ಯರನ್ನು ಹೊಂದಿದ್ದು 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರು ಇದರಲ್ಲಿ ಸೇರಿದ್ದಾರೆ.  ಸಭೆಯಲ್ಲಿ 15 ಮಹಿಳಾ ಪ್ರತಿನಿಧಿಗಳು ಮತ್ತು ಶಶಿ ತರೂರ್, ಸಚಿನ್ ಪೈಲಟ್ ಮತ್ತು ಗೌರವ್ ಗೊಗೊಯ್‌ರಂತಹ ನಾಯಕರು ಕೂಡ ಸೇರಿದ್ದರು.

ಇದನ್ನು ಓದಿ: ಪುನೀತ್ ಕೆರೆಹಳ್ಳಿ ವಿರುದ್ಧದ ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....