Homeಮುಖಪುಟರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

- Advertisement -
- Advertisement -

ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಸೋನಿಯಾ ಗಾಂಧಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಇತರರು ಬರಮಾಡಿಕೊಂಡಿದ್ದರು.

ಈ ಮಧ್ಯೆ ಕಾಂಗ್ರೆಸ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜಸ್ಥಾನದಿಂದ ಸೋನಿಯಾ ಗಾಂಧಿ ಅವರನ್ನು ನಾಮನಿರ್ದೇಶನ ಮಾಡಿದೆ. ಬಿಹಾರದಿಂದ ಕಾಂಗ್ರೆಸ್‌ನ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ನಾಮನಿರ್ದೇಶನಗೊಂಡಿದ್ದಾರೆ.

ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷವು ಒಂದು ರಾಜ್ಯಸಭಾ ಸ್ಥಾನದಲ್ಲಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಇದೇ ಪ್ರಥಮ ಬಾರಿಗೆ ಅವರು ರಾಜ್ಯಸಭೆಯನ್ನು ಪ್ರವೇಶಿಸಲಿದ್ದಾರೆ. ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಗಾಂಧಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ.

15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಎಪ್ರಿಲ್ ತಿಂಗಳಲ್ಲಿ ನಿವೃತ್ತರಾಗುತ್ತಿದ್ದು, ತೆರವಾಗುತ್ತಿರುವ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.

ರಾಜಸ್ಥಾನದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಒಂದು ಸ್ಥಾನದಲ್ಲಿ ಸುಲಭವಾಗಿ ಗೆಲುವು ಸಾಧಿಸಲಿದೆ. ಮಾಜಿ ಪ್ರಧಾನಿ ಮನೋಹನ್ ಸಿಂಗ್ ಅವರ ಆರು ವರ್ಷಗಳ ಅವಧಿಯು ಎಪ್ರಿಲ್ ತಿಂಗಳಲ್ಲಿ ಮುಕ್ತಾಯವಾಗುತ್ತಿರುವುದರಿಂದ ಅವರ ಸ್ಥಾನ ತೆರವಾಗುತ್ತಿದೆ. ಆಗಸ್ಟ್ 1964ರಿಂದ ಫೆಬ್ರವರಿ 1967ರವರೆಗೆ ಇಂದಿರಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದ ನಂತರ ಗಾಂಧಿ ಕುಟುಂಬದಿಂದ ರಾಜ್ಯಸಭೆಯನ್ನು ಪ್ರವೇಶಿಸುತ್ತಿರುವ ಎರಡನೆ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ.

1998 ಮತ್ತು 2022ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1999ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಆಯ್ಕೆಯಾಗಿದ್ದರು ಮತ್ತು ಅಮೇಥಿಯನ್ನು ಉಳಿಸಿಕೊಂಡಿದ್ದರು. 2004ರಲ್ಲಿ ರಾಹುಲ್ ಗಾಂಧಿಗಾಗಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದ್ದಾರೆ ಮತ್ತು ಸೋನಿಯಾ ನಿರಂತರವಾಗಿ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ದ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಗೆಹ್ಲೋಟ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಹಲವು ಬಾರಿ ಭೇಟಿ ಮಾಡಿದ್ದಾರೆ. ಕೆಲವು ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ವರನನ್ನು ಬಲವಂತವಾಗಿ ಕುದುರೆ ಮೇಲಿನಿಂದ ಇಳಿಸಿ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...