Homeಮುಖಪುಟರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ರಾಜ್ಯಸಭಾ ಚುನಾವಣೆ: ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

- Advertisement -
- Advertisement -

ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಸೋನಿಯಾ ಗಾಂಧಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಇತರರು ಬರಮಾಡಿಕೊಂಡಿದ್ದರು.

ಈ ಮಧ್ಯೆ ಕಾಂಗ್ರೆಸ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜಸ್ಥಾನದಿಂದ ಸೋನಿಯಾ ಗಾಂಧಿ ಅವರನ್ನು ನಾಮನಿರ್ದೇಶನ ಮಾಡಿದೆ. ಬಿಹಾರದಿಂದ ಕಾಂಗ್ರೆಸ್‌ನ ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ನಾಮನಿರ್ದೇಶನಗೊಂಡಿದ್ದಾರೆ.

ರಾಜಸ್ಥಾನದಿಂದ ಕಾಂಗ್ರೆಸ್ ಪಕ್ಷವು ಒಂದು ರಾಜ್ಯಸಭಾ ಸ್ಥಾನದಲ್ಲಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ. ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಇದೇ ಪ್ರಥಮ ಬಾರಿಗೆ ಅವರು ರಾಜ್ಯಸಭೆಯನ್ನು ಪ್ರವೇಶಿಸಲಿದ್ದಾರೆ. ಲೋಕಸಭೆಯಲ್ಲಿ ರಾಯ್ ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಗಾಂಧಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿದು ಬಂದಿದೆ.

15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಎಪ್ರಿಲ್ ತಿಂಗಳಲ್ಲಿ ನಿವೃತ್ತರಾಗುತ್ತಿದ್ದು, ತೆರವಾಗುತ್ತಿರುವ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಿಗದಿಯಾಗಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ.

ರಾಜಸ್ಥಾನದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಒಂದು ಸ್ಥಾನದಲ್ಲಿ ಸುಲಭವಾಗಿ ಗೆಲುವು ಸಾಧಿಸಲಿದೆ. ಮಾಜಿ ಪ್ರಧಾನಿ ಮನೋಹನ್ ಸಿಂಗ್ ಅವರ ಆರು ವರ್ಷಗಳ ಅವಧಿಯು ಎಪ್ರಿಲ್ ತಿಂಗಳಲ್ಲಿ ಮುಕ್ತಾಯವಾಗುತ್ತಿರುವುದರಿಂದ ಅವರ ಸ್ಥಾನ ತೆರವಾಗುತ್ತಿದೆ. ಆಗಸ್ಟ್ 1964ರಿಂದ ಫೆಬ್ರವರಿ 1967ರವರೆಗೆ ಇಂದಿರಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದ ನಂತರ ಗಾಂಧಿ ಕುಟುಂಬದಿಂದ ರಾಜ್ಯಸಭೆಯನ್ನು ಪ್ರವೇಶಿಸುತ್ತಿರುವ ಎರಡನೆ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ.

1998 ಮತ್ತು 2022ರ ನಡುವೆ ಸುಮಾರು 22 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರು ಐದು ಬಾರಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1999ರಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಆಯ್ಕೆಯಾಗಿದ್ದರು ಮತ್ತು ಅಮೇಥಿಯನ್ನು ಉಳಿಸಿಕೊಂಡಿದ್ದರು. 2004ರಲ್ಲಿ ರಾಹುಲ್ ಗಾಂಧಿಗಾಗಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಸ್ಪರ್ಧಿಸಿದ್ದರು.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ನಾಮನಿರ್ದೇಶನಗೊಂಡಿರುವುದನ್ನು ಸ್ವಾಗತಿಸಿದ್ದಾರೆ ಮತ್ತು ಸೋನಿಯಾ ನಿರಂತರವಾಗಿ ರಾಜಸ್ಥಾನದೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನು ತ್ಯಜಿಸಿದ್ದ ಶ್ರೀಮತಿ ಸೋನಿಯಾ ಗಾಂಧಿ ಜಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಗೆಹ್ಲೋಟ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಹಲವು ಬಾರಿ ಭೇಟಿ ಮಾಡಿದ್ದಾರೆ. ಕೆಲವು ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ ಭೇಟಿ ಮಾಡಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ದಲಿತ ವರನನ್ನು ಬಲವಂತವಾಗಿ ಕುದುರೆ ಮೇಲಿನಿಂದ ಇಳಿಸಿ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...