Homeಮುಖಪುಟನಾಳೆ ಕಾಂಗ್ರೆಸ್ ಭಿನ್ನಮತೀಯರ ಸಭೆ ನಡೆಸಲಿರುವ ಸೋನಿಯಾ ಗಾಂಧಿ; ರಾಹುಲ್, ಪ್ರಿಯಾಂಕ ಸಾಥ್

ನಾಳೆ ಕಾಂಗ್ರೆಸ್ ಭಿನ್ನಮತೀಯರ ಸಭೆ ನಡೆಸಲಿರುವ ಸೋನಿಯಾ ಗಾಂಧಿ; ರಾಹುಲ್, ಪ್ರಿಯಾಂಕ ಸಾಥ್

ಕಾಂಗ್ರೆಸ್‌ನಲ್ಲಿ ನಾಯಕತ್ವ ಹಾಗೂ ಪಕ್ಷದೊಳಗೆ ಸಾಂಸ್ಥಿಕ ಬದಲಾವಣೆ ಮಾಡಬೇಕು ಎಂದು 23 ಕಾಂಗ್ರೆಸ್ ನಾಯಕರು ಪತ್ರ ಬರೆದಿದ್ದರು.

- Advertisement -
- Advertisement -

ನಾಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷದ ಭಿನ್ನಮತಿಯರ ನಡುವೆ ನಡೆಯಲಿರುವ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ. “ಜಿ -23” ಎಂದು ಕರೆಯಲ್ಪಡುವ 23 “ಭಿನ್ನಮತೀಯರ” ಗುಂಪಿನೊಂದಿಗೆ ನಾಳೆ ಸಭೆ ನಡೆಯಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಾಂಗ್ರೆಸ್‌ನಲ್ಲಿ ನಾಯಕತ್ವ ಹಾಗೂ ಪಕ್ಷದೊಳಗೆ ಸಾಂಸ್ಥಿಕ ಬದಲಾವಣೆ ಮಾಡಬೇಕು ಎಂದು ಪತ್ರ ಬರೆದಿದ್ದ ನಾಯಕರೊಂದಿಗೆ ನಡೆಯುವ ಗಾಂಧಿ ಕುಟುಂಬದ ಸಭೆಯು ತಿಂಗಳುಗಳಿಂದ ನಡೆಯುತ್ತಿರುವ ಆಂತರಿಕ ಕಚ್ಚಾಟವನ್ನು ಸಾಮರಸ್ಯದೆಡೆಗೆ ಕೊಂಡೊಯ್ಯುಲು ಕೆಲಸ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಆದರೆ ಸಭೆಗೆ ಪತ್ರಕ್ಕೆ ಸಹಿ ಹಾಕದ ಇತರ ನಾಯಕರು ಸಹ ಹಾಜರಾಗಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಸಾಂಸ್ಥಿಕ ಚುನಾವಣೆಗೆ ಮುಂಚಿತವಾಗಿ ಸೋನಿಯಾ ಗಾಂಧಿ ವಿವಿಧ ಗುಂಪುಗಳನ್ನು ಭೇಟಿಯಾಗುತ್ತಿದ್ದಾರೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸಭೆಗೆ ಸೋನಿಯಾ ಗಾಂಧಿಯನ್ನು ಒಪ್ಪಿಸುವಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್‌ನಲ್ಲಿ ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡ ಕಮಲ್ ನಾಥ್, ಇದುವರೆಗೂ ಭಿನ್ನಮತೀಯರಿಂದ ದೂರ ಉಳಿದಿದ್ದರು. ಮೂಲಗಳ ಪ್ರಕಾರ ಅವರು ಈಗ ಭಿನ್ನಮತೀಯರನ್ನು ಬೆಂಬಲಿಸಿದ್ದಾರೆ ಎನ್ನಲಾಗಿದೆ.

2014 ರಲ್ಲಿ ಅಧಿಕಾರ ಕಳೆದುಕೊಂಡಾಗಿನಿಂದ ಪಕ್ಷವು ಹಿನ್ನಡೆ ಅನುಭವಿಸುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದ ಕಾಂಗ್ರೆಸ್‌‌ನ 23 ನಾಯಕರು “ಸಕ್ರಿಯ ಮತ್ತು ಗೋಚರ ನಾಯಕತ್ವ ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ”ಗೆ ಕರೆ ನೀಡಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಜಿಯೋದಿಂದ ಪೋರ್ಟ್‌ ಆಗುತ್ತಿರುವ ರೈತ, ಕಸ್ಟಮರ್‌ ಕೇರ್‌ ಜೊತೆ ಹೇಳಿದ್ದೇನು? ವಿಡಿಯೋ ನೋಡಿ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...