Homeಕರ್ನಾಟಕಭಾರತ್‌ ಜೋಡೋದಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ

ಭಾರತ್‌ ಜೋಡೋದಲ್ಲಿ ಪಾಲ್ಗೊಳ್ಳಲು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಕೈಗೊಂಡಿರುವ ಮಹತ್ವಕಾಂಕ್ಷೆಯ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸೋನಿಯಾ ಗಾಂಧಿ ಅವರು ಗುರುವಾರ (ಅಕ್ಟೋಬರ್ 6) ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಪಾದಯಾತ್ರೆ ಆರಂಭವಾದ ಸಂದರ್ಭದಲ್ಲಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾದ ಸೋನಿಯಾ ಅವರು ಇದೇ ಮೊದಲ ಬಾರಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯ ಜಿಲ್ಲೆಯಿಂದ ಪಾದಯಾತ್ರೆಗೆ ಸೇರಿಕೊಳ್ಳಲಿದ್ದಾರೆ. ಅವರು ನಾಳೆ ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ದಿನಗಳ ನಂತರ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅರು ಈ ಕುರಿತು ಸುಳಿವು ನೋಡಿದ್ದರು. ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಜ್ಯದಲ್ಲಿ ಪ್ರತ್ಯೇಕವಾಗಿ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದು, ಶೀಘ್ರದಲ್ಲೇ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದರು.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ‘ಭಾರತ್ ಜೋಡೋ ಯಾತ್ರೆ’ ತಮಿಳುನಾಡು ಮತ್ತು ಕೇರಳದ ನಂತರ ಕರ್ನಾಟಕವನ್ನು ಪ್ರವೇಶಿಸಿದ್ದು, 21 ದಿನಗಳ ಕಾಲ ಇಲ್ಲಿ ಸಾಗಲಿದೆ. ಐದು ತಿಂಗಳಲ್ಲಿ 12 ರಾಜ್ಯಗಳಲ್ಲಿ ಈ ಯಾತ್ರೆ ನಡೆಯಲಿದೆ.

ಅಭಿವ್ಯಕ್ತಿಗಾಗಿ ಇತರ ಎಲ್ಲಾ ವೇದಿಕೆಗಳು ಮುಚ್ಚಲ್ಪಟ್ಟಿರುವುದರಿಂದ ಜನಸಾಮಾನ್ಯರನ್ನು ತಲುಪಲು ಪಕ್ಷಕ್ಕೆ ಉಳಿದಿರುವ ಏಕೈಕ ಆಯ್ಕೆ ‘ಭಾರತ್ ಜೋಡೋ ಯಾತ್ರೆ’ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

“ಸರ್ಕಾರದ ಸಂಪೂರ್ಣ ನಿಯಂತ್ರಣವಿದೆ. ಸಂಸತ್ತಿನಲ್ಲಿ ನಮ್ಮ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ, ಅಸೆಂಬ್ಲಿಗಳು ಕಾರ್ಯನಿರ್ವಹಿಸಲು ಅನುಮತಿಸುವುದಿಲ್ಲ. ಪ್ರತಿಪಕ್ಷಗಳಿಗೆ ಕಿರುಕುಳ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ನಮಗೆ ಉಳಿದಿರುವ ಏಕೈಕ ಆಯ್ಕೆ ಭಾರತ್ ಜೋಡೋ ಯಾತ್ರೆ” ಎಂದು ಸಾರ್ವಜನಿಕ ಸಭೆಯಲ್ಲಿ ಅವರು ತಿಳಿಸಿದ್ದಾರೆ.

ಈ ಯಾತ್ರೆಯನ್ನು ದೇಶದ ಯಾವುದೇ ಶಕ್ತಿ ತಡೆಯಲು ಸಾಧ್ಯವಿಲ್ಲ. ಏಕೆಂದರೆ ಇದು ‘ಭಾರತದ ಮೆರವಣಿಗೆ’ ಎಂದು ಬಣ್ಣಿಸಿದ್ದಾರೆ. “ಇದು ಭಾರತದ ಮೆರವಣಿಗೆ ಮತ್ತು ಭಾರತದ ಧ್ವನಿಯನ್ನು ಕೇಳುವ ಮೆರವಣಿಗೆ, ಇದನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ” ಎಂದಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ನಡೆಯಲಿರುವ ಪಾದಯಾತ್ರೆಯು ಪಕ್ಷದ ಕಾರ್ಯಕರ್ತರಿಗೆ ಚೈತನ್ಯ ತುಂಬಲಿದೆ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ.

ಇದನ್ನೂ ಓದಿರಿ: ವರುಣನ ನಡುವೆಯೇ ರಾಹುಲ್ ಭಾಷಣ; ‘ಮೆಚ್ಚುಗೆಯ ಮಳೆ’ ಸುರಿಸಿದ ಜನತೆ

ಕರ್ನಾಟಕದ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯಲಿದೆ. ರಾಯಚೂರು ಬಳಿಕ ಮೆರವಣಿಗೆ ತೆಲಂಗಾಣ ಪ್ರವೇಶಿಸಲಿದೆ.

ರಾಯಚೂರು ಮೂಲಕ ರಾಜ್ಯದಿಂದ ನಿರ್ಗಮಿಸುವ ಮೊದಲು ಅಕ್ಟೋಬರ್ 19 ರಂದು ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಯೋಜಿಸಲಾಗಿದೆ.

ಈ ಹಿಂದೆ ಸೋನಿಯಾ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರಿಂದ ಬಳ್ಳಾರಿ, ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಮತ್ತು ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪಕ್ಷವು ಬಳ್ಳಾರಿಗೆ ಪಾದಯಾತ್ರೆಯನ್ನು ನಡೆಸಿತ್ತು. ಅದು ಚುನಾವಣೆಯಲ್ಲೂ ಪ್ರಭಾವ ಬೀರಿತ್ತು. ನಂತರದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...