Homeಮುಖಪುಟಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಕಳೆದ ಜುಲೈನಲ್ಲಿ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೂ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ಜುಲೈನಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ನಂತರ ಸೋನಿಯಾ ಗಾಂಧಿಯವರು ಹಂಗಾಮಿ ಮುಖ್ಯಸ್ಥರಾಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಸೇರಿದಂತೆ ಹಲವರು ಹೊಸ ಅಧ್ಯಕ್ಷರು ಬೇಕೆಂದು ಚರ್ಚೆ ಎತ್ತಿದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸದ್ಯಕ್ಕಂತೂ ಸೋನಿಯಾರವರೆ ಮುಂದುವರೆಯಲಿದ್ದಾರೆ ಎಂದಿದೆ.

1998 ರಿಂದ 2017ರವರೆಗೆ ಹೆಚ್ಚು ಕಡಿಮೆ 20 ವರ್ಷಗಳ ಸುಧೀರ್ಘ ಅವಧಿಗೆ ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿದ್ದರು. ಈ ಅವಯಲ್ಲಿ 2004 ಮತ್ತು 2009 ರಲ್ಲಿ ಯುಪಿಎ ನೇತೃತ್ವ ವಹಿಸಿ ಪಕ್ಷದ ಗೆಲುವಿನಲ್ಲಿ ಮತ್ತು ಕೇಂದ್ರದಲ್ಲಿ ಎರಡು ಭಾರಿ ಪಕ್ಷವು ಅಧಿಕಾರ ಹಿಡಿಯುವಲ್ಲಿ ಶ್ರಮಿಸಿದ್ದರು. ಆದರೆ 2014 ರಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲುಂಡಿತ್ತು.

2017ರ ಡಿಸೆಂಬರ್‌ನಲ್ಲಿ ಅವರ ಪಕ್ಷದ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದು ಅವರ ಮಗ ರಾಹುಲ್ ಗಾಂಧಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೊಸ ಹರುಪಿನೊಂದಿಗೆ ಕೆಲಸ ಮಾಡಿದರೂ ಸಹ ಅವರ ನೇತೃತ್ವದಲ್ಲಿ ಕಳೆದ ವರ್ಷ ಮೇ ತಿಂಗಳ ಸಾರ್ವತ್ರಿಕ ಚುನಾವಣೆಯ 543 ಸಂಸದೀಯ ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳಿಗೆ ಕುಸಿದಿತ್ತು. ಸೋಲಿನ ಹೊಣೆ ಹೊತ್ತ ರಾಹುಲ್ ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಮತ್ತೆ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಪೂರ್ಣಾವಧಿ ಅಧ್ಯಕ್ಷರು ಬೇಕು – ಶಶಿ ತರೂರ್

ಕಾಂಗ್ರೆಸ್‌ ಪಕ್ಷವು ಗೊತ್ತು ಗುರಿಯಿಲ್ಲದ ಹಡಗಿನಂತಾಗಿದೆ ಎಂಬ ಅಭಿಪ್ರಾಯ ಜನರ ಮನಸ್ಸಿನಲ್ಲಿದೆ. ಇದನ್ನು ತೊಡೆದುಹಾಕಲು ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯವಿದೆ ಎಂದು ಸಂಸದ ಶಶಿ ತರೂರ್‌ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿಯವರು ಆಯ್ಕೆಯಾದಾಗ ಅದನ್ನು ನಾನು ಸ್ವಾಗತಿಸಿದ್ದೆ. ಆದರೆ ನಿರಂತರವಾಗಿ ಅವರ ಮೇಲೆಯೇ ಹೊರೆ ಹಾಕುವುದು ಸರಿಯಲ್ಲ. ರಾಹುಲ್ ಗಾಂಧಿಯವರು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ಭರವಸೆ ನನಗಿದೆ. ಆದರೆ ಅವರು ಒಪ್ಪದಿದ್ದರೆ ಹೊಸ ಅಧ್ಯಕ್ಷರು ಪಕ್ಷಕ್ಕೆ ಅತ್ಯಗತ್ಯ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ನಡೆದ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭಾ ಸಂಸದ ಹಾಗೂ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಸಂವಿಧಾನದಲ್ಲಿ ತಿಳಿಸಿರುವ ಚುನಾವಣಾ ವಿಧಾನವನ್ನು ಅನುಸರಿಸಲು ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ, ಸರಿಯಾದ ಕಾರ್ಯವಿಧಾನವನ್ನು ಜಾರಿಗೆ ತರುವವರೆಗೂ ಅವರೆ ಮುಂದುವರಿಯುತ್ತಾರೆ ಮತ್ತು ಭವಿಷ್ಯದಲ್ಲಿ ಚುನಾವಣಾ ವಿಧಾನವನ್ನು ಜಾರಿಗೆ ತರಲಾಗುವುದು” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಇರುವ ಕಾರಣ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಪಕ್ಷ ತಿಳಿಸಿದೆ.


ಓದಿ:

ಗಡಿ ಬಿಕ್ಕಟ್ಟಿಗೆ ಕೇಂದ್ರದ ಅಸಮರ್ಪಕ ನೀತಿಗಳೇ ಕಾರಣ – ಸೋನಿಯಾ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...