Homeಮುಖಪುಟಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಕಳೆದ ಜುಲೈನಲ್ಲಿ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

- Advertisement -
- Advertisement -

ಕಾಂಗ್ರೆಸ್ ಪಕ್ಷಕ್ಕೆ ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೂ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರೇ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಳೆದ ಜುಲೈನಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ನಂತರ ಸೋನಿಯಾ ಗಾಂಧಿಯವರು ಹಂಗಾಮಿ ಮುಖ್ಯಸ್ಥರಾಗಿ ಇಂದಿಗೆ ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಸೇರಿದಂತೆ ಹಲವರು ಹೊಸ ಅಧ್ಯಕ್ಷರು ಬೇಕೆಂದು ಚರ್ಚೆ ಎತ್ತಿದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸದ್ಯಕ್ಕಂತೂ ಸೋನಿಯಾರವರೆ ಮುಂದುವರೆಯಲಿದ್ದಾರೆ ಎಂದಿದೆ.

1998 ರಿಂದ 2017ರವರೆಗೆ ಹೆಚ್ಚು ಕಡಿಮೆ 20 ವರ್ಷಗಳ ಸುಧೀರ್ಘ ಅವಧಿಗೆ ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿದ್ದರು. ಈ ಅವಯಲ್ಲಿ 2004 ಮತ್ತು 2009 ರಲ್ಲಿ ಯುಪಿಎ ನೇತೃತ್ವ ವಹಿಸಿ ಪಕ್ಷದ ಗೆಲುವಿನಲ್ಲಿ ಮತ್ತು ಕೇಂದ್ರದಲ್ಲಿ ಎರಡು ಭಾರಿ ಪಕ್ಷವು ಅಧಿಕಾರ ಹಿಡಿಯುವಲ್ಲಿ ಶ್ರಮಿಸಿದ್ದರು. ಆದರೆ 2014 ರಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲುಂಡಿತ್ತು.

2017ರ ಡಿಸೆಂಬರ್‌ನಲ್ಲಿ ಅವರ ಪಕ್ಷದ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದು ಅವರ ಮಗ ರಾಹುಲ್ ಗಾಂಧಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೊಸ ಹರುಪಿನೊಂದಿಗೆ ಕೆಲಸ ಮಾಡಿದರೂ ಸಹ ಅವರ ನೇತೃತ್ವದಲ್ಲಿ ಕಳೆದ ವರ್ಷ ಮೇ ತಿಂಗಳ ಸಾರ್ವತ್ರಿಕ ಚುನಾವಣೆಯ 543 ಸಂಸದೀಯ ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳಿಗೆ ಕುಸಿದಿತ್ತು. ಸೋಲಿನ ಹೊಣೆ ಹೊತ್ತ ರಾಹುಲ್ ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಮತ್ತೆ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಪೂರ್ಣಾವಧಿ ಅಧ್ಯಕ್ಷರು ಬೇಕು – ಶಶಿ ತರೂರ್

ಕಾಂಗ್ರೆಸ್‌ ಪಕ್ಷವು ಗೊತ್ತು ಗುರಿಯಿಲ್ಲದ ಹಡಗಿನಂತಾಗಿದೆ ಎಂಬ ಅಭಿಪ್ರಾಯ ಜನರ ಮನಸ್ಸಿನಲ್ಲಿದೆ. ಇದನ್ನು ತೊಡೆದುಹಾಕಲು ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯವಿದೆ ಎಂದು ಸಂಸದ ಶಶಿ ತರೂರ್‌ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾಗಾಂಧಿಯವರು ಆಯ್ಕೆಯಾದಾಗ ಅದನ್ನು ನಾನು ಸ್ವಾಗತಿಸಿದ್ದೆ. ಆದರೆ ನಿರಂತರವಾಗಿ ಅವರ ಮೇಲೆಯೇ ಹೊರೆ ಹಾಕುವುದು ಸರಿಯಲ್ಲ. ರಾಹುಲ್ ಗಾಂಧಿಯವರು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ಭರವಸೆ ನನಗಿದೆ. ಆದರೆ ಅವರು ಒಪ್ಪದಿದ್ದರೆ ಹೊಸ ಅಧ್ಯಕ್ಷರು ಪಕ್ಷಕ್ಕೆ ಅತ್ಯಗತ್ಯ ಎಂದು ತರೂರ್ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ನಡೆದ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಸಭಾ ಸಂಸದ ಹಾಗೂ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ ಸಂವಿಧಾನದಲ್ಲಿ ತಿಳಿಸಿರುವ ಚುನಾವಣಾ ವಿಧಾನವನ್ನು ಅನುಸರಿಸಲು ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ.

“ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾರೆ, ಸರಿಯಾದ ಕಾರ್ಯವಿಧಾನವನ್ನು ಜಾರಿಗೆ ತರುವವರೆಗೂ ಅವರೆ ಮುಂದುವರಿಯುತ್ತಾರೆ ಮತ್ತು ಭವಿಷ್ಯದಲ್ಲಿ ಚುನಾವಣಾ ವಿಧಾನವನ್ನು ಜಾರಿಗೆ ತರಲಾಗುವುದು” ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಕೊರೊನಾ ವೈರಸ್ ಸಾಂಕ್ರಾಮಿಕ ಮತ್ತು ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಇರುವ ಕಾರಣ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಪಕ್ಷ ತಿಳಿಸಿದೆ.


ಓದಿ:

ಗಡಿ ಬಿಕ್ಕಟ್ಟಿಗೆ ಕೇಂದ್ರದ ಅಸಮರ್ಪಕ ನೀತಿಗಳೇ ಕಾರಣ – ಸೋನಿಯಾ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...