Homeಮುಖಪುಟಅಟಲ್ ಸುರಂಗದಿಂದ ಸೋನಿಯಾ ಗಾಂಧಿ ಹೆಸರು ನಾಪತ್ತೆ: ಪ್ರತಿಭಟನೆ ಎಚ್ಚರಿಕೆ

ಅಟಲ್ ಸುರಂಗದಿಂದ ಸೋನಿಯಾ ಗಾಂಧಿ ಹೆಸರು ನಾಪತ್ತೆ: ಪ್ರತಿಭಟನೆ ಎಚ್ಚರಿಕೆ

2010ರ ಜುಲೈ 28ರಂದು ಈ ಸುರಂಗಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಡಿಗಲ್ಲು ಹಾಕಿದ್ದರು. ಈ ವೇಳೆ ಸೋನಿಯಾ ಅವರ ಹೆಸರಿದ್ದ ಫಲಕವನ್ನ ಇಲ್ಲಿ ಹಾಕಲಾಗಿತ್ತು.

- Advertisement -
- Advertisement -

ಅಕ್ಟೋಬರ್ 3 ರಂದು ಲೋಕಾರ್ಪಣೆಗೊಂಡ ಹಿಮಾಚಲಪ್ರದೇಶದ ರೋಹ್ಟಂಗ್​ನ ಅಟಲ್ ಸುರಂಗದಲ್ಲಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರಿದ್ದ ಫಲಕವನ್ನ ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಹಿಮಾಚಲ ಪ್ರದೇಶದ ಕಾಂಗ್ರೆಸ್ ಮುಖಂಡರು ಶ್ರೀಮತಿ ಸೋನಿಯಾ ಗಾಂಧಿಯವರ ಹೆಸರನ್ನು ಹೊಂದಿರುವ ಅಡಿಪಾಯ ಫಲಕವನ್ನು ಅದರ ಉದ್ಘಾಟನೆಗೆ ಮುನ್ನ ಸುರಂಗದಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಈ ಘಟನೆ ವಿರುದ್ಧ ಹಿಮಾಚಲ ಪ್ರದೇಶದ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಪತ್ರ ಬರೆದಿದ್ದಾರೆ.

ಮನಾಲಿಯನ್ನು ಲಾಹೌಲ್-ಸ್ಪಿತಿ ಕಣಿವೆಯೊಂದಿಗೆ ಸಂಪರ್ಕಿಸುವ ಮತ್ತು ಲಡಾಖ್‌ನ ಲೇಹ್‌ಗೆ ಪ್ರಯಾಣದ ಸಮಯವನ್ನು ಐದು ಗಂಟೆಗಳವರೆಗೆ ಕಡಿಮೆ ಮಾಡುವ ಮಹತ್ವದ ಅಟಲ್ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಅ.3ರಂದು ಉದ್ಘಾಟಿಸಿದರು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಈ ಮಹಿಳೆ ವಾಜಪೇಯಿಯವರ ಸೊಸೆ ಅಲ್ಲ

ಅಟಲ್ ಸುರಂಗ
PC: Onmanorama

ಆದರೆ 2010ರ ಜುಲೈ 28ರಂದು ಈ ಸುರಂಗಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಡಿಗಲ್ಲು ಹಾಕಿದ್ದರು. ಈ ವೇಳೆ ಸೋನಿಯಾ ಅವರ ಹೆಸರಿದ್ದ ಫಲಕವನ್ನ ಇಲ್ಲಿ ಹಾಕಲಾಗಿತ್ತು. ಆದರೆ ಸುರಂಗ ಉದ್ಘಾಟನೆಗೂ ಮುನ್ನ ಫಲಕವನ್ನ ತೆಗೆದುಹಾಕಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಈ ಕುರಿತು ಹಿಮಾಚಲಪ್ರದೇಶದ ಕಾಂಗ್ರೆಸ್​ ಅಧ್ಯಕ್ಷ ಕುಲ್ದೀಪ್ ಸಿಂಗ್​ ರಾಥೋಡ್, ಹಿಮಾಚಲಪ್ರದೇಶದ ಮುಖ್ಯಮಂತ್ರಿ ಜೈರಾಮ್​ ಠಾಕೂರ್ ಅವರಿಗೆ ಪತ್ರ ಬರೆದು, ಫಲಕ ತೆಗೆದುಹಾಕಿದ್ದರ ವಿರುದ್ಧ ಪ್ರತಿಭಟನೆ ಮಾಡುವುದಾಗಿ ​ಎಚ್ಚರಿಕೆ ನೀಡಿದ್ದಾರೆ. ಕಾಣೆಯಾಗಿರುವ ಅಡಿಪಾಯದ ಫಲಕವನ್ನ ಪುನಃ ಸ್ಥಾಪನೆ ಮಾಡದಿದ್ದರೆ, ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ. “ಇದು ಪ್ರಜಾಪ್ರಭುತ್ವ ವಿರೋಧಿ, ಅಸಾಂಪ್ರದಾಯಿಕ ಮತ್ತು ಕಾನೂನುಬಾಹಿರ ಹೆಜ್ಜೆಯಾಗಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಡಿಪಾಯದ ಫಲಕ ಕಾಣೆಯಾಗಿರುವ ಬಗ್ಗೆ ತನಿಖೆ ಮಾಡುವಂತೆ ಪಕ್ಷದ ಮುಖಂಡರಾದ ಗಿಯಾಲ್ಚನ್ ಠಾಕೂರ್ ಹಾಗೂ ಹರಿಚಂದ್​ ಶರ್ಮಾ ಕೀಲಾಂಗ್ ಹಾಗೂ ಮನಾಲಿಯಲ್ಲಿ ಪೊಲೀಸ್​ ಪ್ರಕರಣ ದಾಖಲಿಸಿದ್ದಾರೆ.

ಹಿಮಾಚಲದಲ್ಲಿ ರೋಹ್ಟಾಂಗ್‌ನಲ್ಲಿ ಸುರಂಗ ನಿರ್ಮಿಸುವ ನಿರ್ಧಾರವನ್ನು ಅಟಲ್ ಬಿಹಾರಿ ವಾಜಪೇಯಿ ಪ್ರಧಾನ ಮಂತ್ರಿಯಾಗಿದ್ದಾಗ 2000ರ ಜೂನ್ 3 ರಂದು ತೆಗೆದುಕೊಳ್ಳಲಾಗಿತ್ತು. ಮಾಜಿ ಪ್ರಧಾನಿ ನೀಡಿದ ಕೊಡುಗೆಯನ್ನು ಗೌರವಿಸಲು ರೋಹ್ಟಾಂಗ್ ಸುರಂಗವನ್ನು ಅಟಲ್ ಸುರಂಗ ಎಂದು ಹೆಸರಿಸಲು ಕೇಂದ್ರ ಸಚಿವ ಸಂಪುಟ 2019 ರಲ್ಲಿ ನಿರ್ಧರಿಸಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...