Homeಅಂತರಾಷ್ಟ್ರೀಯತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

- Advertisement -
- Advertisement -

ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್‌‌‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳಾದ ಯೂನಸ್ ಸಿದ್ದಿಕಿ (6) ಮತ್ತು ಸಾರಾ ಸಿದ್ದಿಕಿ (4) ನ್ಯಾಯಾರ್ಕ್‌ನಲ್ಲಿ ತಮ್ಮ ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿಯನ್ನು ಶುಕ್ರವಾರ ಸ್ವೀಕರಿಸಿದ್ದಾರೆ.

ಜಾಗತಿಕ ಸುದ್ದಿ ಸಂಸ್ಥೆಯಾಗಿರುವ ರಾಯಿಟರ್ಸ್‌‌ನಲ್ಲಿ ಡ್ಯಾನಿಶ್ ಸಿದ್ದೀಖಿ ಅವರು ಸೇವೆ ಸಲ್ಲಿಸುತ್ತಿದ್ದರು. ತಮ್ಮ “ಭಾರತದಲ್ಲಿ ಕೊರೊನಾ ಸಂಕಷ್ಠದ ಚಿತ್ರಗಳಿಗಾಗಿ” ರಾಯಿಟರ್ಸ್‌ ಪತ್ರಕರ್ತರಾದ ಅದ್ನಾನ್ ಅಬಿದಿ, ಅಮಿತ್ ದೇವ್, ಡ್ಯಾನಿಶ್ ಸಿದ್ದೀಖಿ ಮತ್ತು ಸನ್ನಾ ಇರ್ಷಾದ್ ಮಟ್ಟೂ ಅವರುಗಳು ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

38ರ ಹರೆಯದ ಡ್ಯಾನಿಶ್ ಸಿದ್ದೀಖಿ ಅವರು ಕಳೆದ ವರ್ಷ ಜುಲೈನಲ್ಲಿ ಅಫ್ಘಾನಿಸ್ತಾನಕ್ಕೆ ವರದಿಗೆಂದು ತೆರಳಿದ್ದಾಗ, ಕಂದಹಾರ್ ನಗರದ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಘರ್ಷಣೆಯ ವೇಳೆ ಕೊಲ್ಲಲ್ಪಟ್ಟರು. ಅವರ ಮಕ್ಕಳು ತಮ್ಮ ತಂದೆಯ ಪರವಾಗಿ ಬಹುಮಾನವನ್ನು ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ಇದು ಡ್ಯಾನಿಶ್ ಸಿದ್ದೀಖಿ ಅವರಿಗೆ ದಕ್ಕುತ್ತಿರುವ ಎರಡನೇ ಪುಲಿಟ್ಜರ್ ಪ್ರಶಸ್ತಿಯಾಗಿದೆ. ಈ ಹಿಂದೆ ಅವರಿಗೆ ರೋಹಿಂಗ್ಯಾ ಬಿಕ್ಕಟ್ಟಿನ ವರದಿಗಾಗಿ ರಾಯಿಟರ್ಸ್ ತಂಡದ ಭಾಗವಾಗಿ 2018 ರಲ್ಲಿ ಪುಲಿಟ್ಜರ್‌‌‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ಡ್ಯಾನಿಶ್ ಸಿದ್ದೀಖಿ ಅವರು ಅಫ್ಘಾನಿಸ್ತಾನ ಸಂಘರ್ಷ, ಹಾಂಗ್ ಕಾಂಗ್ ಪ್ರತಿಭಟನೆಗಳು ಮತ್ತು ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿನ ಇತರ ಪ್ರಮುಖ ಘಟನೆಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದು ಜಾಗತಿಕವಾಗಿ ವರದಿ ಮಾಡಿದ್ದಾರೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ಡ್ಯಾನಿಶ್ ಸಿದ್ದೀಖಿ ಅವರು 2007 ರಲ್ಲಿ ಜಾಮಿಯಾದಲ್ಲಿನ AJK ಸಮೂಹ ಸಂವಹನ ಸಂಶೋಧನಾ ಕೇಂದ್ರದಿಂದ ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಡ್ಯಾನಿಶ್ ಸಿದ್ದೀಖಿ ಅವರು ದೂರದರ್ಶನ ಸುದ್ದಿ ವರದಿಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ನಂತರ ಫೋಟೋ ಜರ್ನಲಿಸ್ಟ್‌‌ ಆಗಿ ಬದಲಾದ ಅವರು, 2010 ರಲ್ಲಿ ಇಂಟರ್ನ್ ಆಗಿ ರಾಯಿಟರ್ಸ್ ಸೇರಿದ್ದರು.

ಈ ಮಧ್ಯೆ, ಡ್ಯಾನಿಶ್‌‌ ಸಿದ್ದೀಖಿ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿರುವ ಸನ್ನಾ ಇರ್ಷಾದ್ ಮಟ್ಟೂ ಅವರನ್ನು ವಲಸೆ ಅಧಿಕಾರಿಗಳ ಮೂಲಕ ವಿಮಾನ ನಿಲ್ದಾಣದಲ್ಲಿ ಸರ್ಕಾರ ತಡೆದಿದೆ. ಅದರಿಂದಾಗಿ ಅವರು ನ್ಯೂಯಾರ್ಕ್‌ಗೆ ತೆರಳಲು ಅಸಾಧ್ಯವಾಗಿದ್ದು, ಅವರು ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ.

ಈ ವರ್ಷದ ಆರಂಭದಲ್ಲಿ ಕೂಡಾ ಅವರನ್ನು ಫ್ರಾನ್ಸ್‌ಗೆ ಪ್ರಯಾಣಿಸುವುದನ್ನು ತಡೆಯಲಾಗಿತ್ತು. ಅವರು ಅಲ್ಲಿ ಪುಸ್ತಕ ಬಿಡುಗಡೆ ಮತ್ತು ಛಾಯಾಗ್ರಹಣ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನ್ಯೂಯಾರ್ಕ್‌ ತಡೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡುರುವ ಸನ್ನಾ ಅವರು,“ನನ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗಿದೆ ಮತ್ತು ಸರಿಯಾದ ಅಮೆರಿಕ ವೀಸಾ ಮತ್ತು ಟಿಕೆಟ್ ಅನ್ನು ಹೊಂದಿದ್ದರೂ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...