Homeಅಂತರಾಷ್ಟ್ರೀಯತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

- Advertisement -
- Advertisement -

ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್‌‌‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳಾದ ಯೂನಸ್ ಸಿದ್ದಿಕಿ (6) ಮತ್ತು ಸಾರಾ ಸಿದ್ದಿಕಿ (4) ನ್ಯಾಯಾರ್ಕ್‌ನಲ್ಲಿ ತಮ್ಮ ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಪ್ರಶಸ್ತಿಯನ್ನು ಶುಕ್ರವಾರ ಸ್ವೀಕರಿಸಿದ್ದಾರೆ.

ಜಾಗತಿಕ ಸುದ್ದಿ ಸಂಸ್ಥೆಯಾಗಿರುವ ರಾಯಿಟರ್ಸ್‌‌ನಲ್ಲಿ ಡ್ಯಾನಿಶ್ ಸಿದ್ದೀಖಿ ಅವರು ಸೇವೆ ಸಲ್ಲಿಸುತ್ತಿದ್ದರು. ತಮ್ಮ “ಭಾರತದಲ್ಲಿ ಕೊರೊನಾ ಸಂಕಷ್ಠದ ಚಿತ್ರಗಳಿಗಾಗಿ” ರಾಯಿಟರ್ಸ್‌ ಪತ್ರಕರ್ತರಾದ ಅದ್ನಾನ್ ಅಬಿದಿ, ಅಮಿತ್ ದೇವ್, ಡ್ಯಾನಿಶ್ ಸಿದ್ದೀಖಿ ಮತ್ತು ಸನ್ನಾ ಇರ್ಷಾದ್ ಮಟ್ಟೂ ಅವರುಗಳು ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

38ರ ಹರೆಯದ ಡ್ಯಾನಿಶ್ ಸಿದ್ದೀಖಿ ಅವರು ಕಳೆದ ವರ್ಷ ಜುಲೈನಲ್ಲಿ ಅಫ್ಘಾನಿಸ್ತಾನಕ್ಕೆ ವರದಿಗೆಂದು ತೆರಳಿದ್ದಾಗ, ಕಂದಹಾರ್ ನಗರದ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಘರ್ಷಣೆಯ ವೇಳೆ ಕೊಲ್ಲಲ್ಪಟ್ಟರು. ಅವರ ಮಕ್ಕಳು ತಮ್ಮ ತಂದೆಯ ಪರವಾಗಿ ಬಹುಮಾನವನ್ನು ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

ಇದು ಡ್ಯಾನಿಶ್ ಸಿದ್ದೀಖಿ ಅವರಿಗೆ ದಕ್ಕುತ್ತಿರುವ ಎರಡನೇ ಪುಲಿಟ್ಜರ್ ಪ್ರಶಸ್ತಿಯಾಗಿದೆ. ಈ ಹಿಂದೆ ಅವರಿಗೆ ರೋಹಿಂಗ್ಯಾ ಬಿಕ್ಕಟ್ಟಿನ ವರದಿಗಾಗಿ ರಾಯಿಟರ್ಸ್ ತಂಡದ ಭಾಗವಾಗಿ 2018 ರಲ್ಲಿ ಪುಲಿಟ್ಜರ್‌‌‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ತಂದೆಯ ಪರವಾಗಿ ಪ್ರತಿಷ್ಠಿತ ಪುಲಿಟ್ಜರ್‌ ಸ್ವೀಕರಿಸಿದ ಫೋಟೋ ಜರ್ನಲಿಸ್ಟ್‌‌ ದಿವಂಗತ ಡ್ಯಾನಿಶ್ ಸಿದ್ದೀಖಿ ಅವರ ಮಕ್ಕಳು

ಡ್ಯಾನಿಶ್ ಸಿದ್ದೀಖಿ ಅವರು ಅಫ್ಘಾನಿಸ್ತಾನ ಸಂಘರ್ಷ, ಹಾಂಗ್ ಕಾಂಗ್ ಪ್ರತಿಭಟನೆಗಳು ಮತ್ತು ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿನ ಇತರ ಪ್ರಮುಖ ಘಟನೆಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದು ಜಾಗತಿಕವಾಗಿ ವರದಿ ಮಾಡಿದ್ದಾರೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿರುವ ಡ್ಯಾನಿಶ್ ಸಿದ್ದೀಖಿ ಅವರು 2007 ರಲ್ಲಿ ಜಾಮಿಯಾದಲ್ಲಿನ AJK ಸಮೂಹ ಸಂವಹನ ಸಂಶೋಧನಾ ಕೇಂದ್ರದಿಂದ ಸಮೂಹ ಸಂವಹನದಲ್ಲಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ಫೀಚರ್‌ ಫೋಟೊಗ್ರಫಿಗಾಗಿ ಪ್ರತಿಷ್ಠಿತ ‘ಪುಲಿಟ್ಜರ್‌‌-2022’ ಪ್ರಶಸ್ತಿ ಗೆದ್ದ ಭಾರತೀಯ ಪತ್ರಕರ್ತರ ಪರಿಚಯ ಮತ್ತು ಫೊಟೊಗಳು ಹೀಗಿವೆ

ಡ್ಯಾನಿಶ್ ಸಿದ್ದೀಖಿ ಅವರು ದೂರದರ್ಶನ ಸುದ್ದಿ ವರದಿಗಾರರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ನಂತರ ಫೋಟೋ ಜರ್ನಲಿಸ್ಟ್‌‌ ಆಗಿ ಬದಲಾದ ಅವರು, 2010 ರಲ್ಲಿ ಇಂಟರ್ನ್ ಆಗಿ ರಾಯಿಟರ್ಸ್ ಸೇರಿದ್ದರು.

ಈ ಮಧ್ಯೆ, ಡ್ಯಾನಿಶ್‌‌ ಸಿದ್ದೀಖಿ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿರುವ ಸನ್ನಾ ಇರ್ಷಾದ್ ಮಟ್ಟೂ ಅವರನ್ನು ವಲಸೆ ಅಧಿಕಾರಿಗಳ ಮೂಲಕ ವಿಮಾನ ನಿಲ್ದಾಣದಲ್ಲಿ ಸರ್ಕಾರ ತಡೆದಿದೆ. ಅದರಿಂದಾಗಿ ಅವರು ನ್ಯೂಯಾರ್ಕ್‌ಗೆ ತೆರಳಲು ಅಸಾಧ್ಯವಾಗಿದ್ದು, ಅವರು ಪುಲಿಟ್ಜರ್ ಪ್ರಶಸ್ತಿಯನ್ನು ಸ್ವೀಕರಿಸಲು ಸಾಧ್ಯವಾಗಲಿಲ್ಲ.

ಈ ವರ್ಷದ ಆರಂಭದಲ್ಲಿ ಕೂಡಾ ಅವರನ್ನು ಫ್ರಾನ್ಸ್‌ಗೆ ಪ್ರಯಾಣಿಸುವುದನ್ನು ತಡೆಯಲಾಗಿತ್ತು. ಅವರು ಅಲ್ಲಿ ಪುಸ್ತಕ ಬಿಡುಗಡೆ ಮತ್ತು ಛಾಯಾಗ್ರಹಣ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ನ್ಯೂಯಾರ್ಕ್‌ ತಡೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡುರುವ ಸನ್ನಾ ಅವರು,“ನನ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗಿದೆ ಮತ್ತು ಸರಿಯಾದ ಅಮೆರಿಕ ವೀಸಾ ಮತ್ತು ಟಿಕೆಟ್ ಅನ್ನು ಹೊಂದಿದ್ದರೂ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸುವುದನ್ನು ನಿರ್ಬಂಧಿಸಲಾಗಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...