Homeಮುಖಪುಟಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಆ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಅದಕ್ಕಾಗಿ ಆ ಕುಟುಂಬಕ್ಕೆ ಟ್ರಾಕ್ಟರ್ ನೀಡುತ್ತಿದ್ದೇನೆ ಎಂದು ಸೋನು ಸೂದ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಬಾಲಿವುಡ್ ನಟ ಸೋನು ಸೂದ್ ಚಿತ್ತೂರು ಜಿಲ್ಲೆಯ ರೈತನೊಬ್ಬರಿಗೆ ಸಹಾಯ ಮಾಡಲು ಟ್ರಾಕ್ಟರ್ ಅನ್ನು ಉಡುಗೊರೆಯಾಗಿ ನೀಡಿದ ನಂತರ, ಕುಟುಂಬವು ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದು, ಸೋನು ಸೂದ್‌ ನಮಗೆ “ದೇವರಿಗಿಂತ ಕಡಿಮೆಯಿಲ್ಲ” ಎಂದಿದ್ದಾರೆ.

“ಅವರು ಚಲನಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಬಹುದು ಆದರೆ ನಿಜ ಜೀವನದಲ್ಲಿ ಅವರು ನಾಯಕ. ಅವರು ಸಾವಿರಾರು ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತಲುಪಲು ಸಹಾಯ ಮಾಡುತ್ತಿರುವ ವೀರ ಎಂಬ ವರದಿಗಳನ್ನು ಕೇಳಿದ್ದೆವು. ಆದರೆ ಇಂದು ನಾವು ಕೂಡ ಅವರ ಫಲಾನುಭವಿಯಾಗಿದ್ದೇವೆ. ಅವರು ನಮಗೆ ದೇವರಿಗಿಂತ ಕಡಿಮೆಯಿಲ್ಲ” ಎಂದು ನಟನಿಂದ ಟ್ರ್ಯಾಕ್ಟರ್ ಪಡೆದ ರೈತ ನಾಗೇಶ್ವರ ರಾವ್ ಹೇಳಿದ್ದಾರೆ.

ಸೋನು ಸೂದ್ ನಮ್ಮ ಬಡತನವನ್ನು ಗುರುತಿಸಿ ತಕ್ಷಣ ನಮಗೆ ಸಹಾಯ ಮಾಡಿದರು ಎಂದು ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ನಾಗೇಶ್ವರ ರಾವ್ ಅವರ ಮಗಳು ವೆನ್ನೆಲಾ ಮಾತನಾಡಿ “ನಾವು ಕೃಷಿ ಮಾಡಲು ಬಯಸಿದ್ದೆವು. ಆದರೆ ನಮ್ಮ ಬಳಿ ಹಣವಿರಲಿಲ್ಲ. ಆದ್ದರಿಂದ ನಮ್ಮ ಕುಟುಂಬ ಸದಸ್ಯರು ಎಲ್ಲರೂ ಸೇರಿ ದೈಹಿಕ ಕೆಲಸ ಮಾಡಲು ಆರಂಭಿಸಿದೆವು. ಈ ವಿಷಯ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ವೈರಲ್ ಆಗಿದೆ. ಸೋನು ಸೂದ್ ಜಿ ನಮ್ಮ ಅವಸ್ಥೆಯ ಬಗ್ಗೆ ತಿಳಿದು ಸಹಾಯ ಮಾಡಿದ್ದಾರೆ. ಅವರಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ಚಿತ್ತೂರು ಜಿಲ್ಲೆಯ ಇಬ್ಬರು ಹೆಣ್ಣುಮಕ್ಕಳು ವೆನ್ನೆಲಾ ಮತ್ತು ಚಂದನಾ ತಮ್ಮ ಭೂಮಿಯನ್ನು ಉಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಭೂಮಿಯನ್ನು ಉಳುಮೆ ಮಾಡಲು ಕುಟುಂಬವು ಟ್ರಾಕ್ಟರ್ ಅಥವಾ ಎತ್ತುಗಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಸಾಧ್ಯವಾಗದ ಕಾರಣ ತಮ್ಮ ಭುಜದ ಮೇಲೆ ನೊಗ ಹೊತ್ತು ಉತ್ತಿದ್ದರು. ಈ ವಿಡಿಯೋ ನೋಡಿದ ಸೋನು ಸೂದ್ ಅವರ ಮನೆಗೆ ಟ್ರಾಕ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಕಳೆದ 20 ವರ್ಷಗಳಿಂದ ಮದನಪಲ್ಲೆ ಮಂಡಲದಲ್ಲಿ ಚಹಾ ಅಂಗಡಿಯೊಂದನ್ನು ನಡೆಸುತ್ತಿದ್ದ ಆ ಹೆಣ್ಣು ಮಕ್ಕಳ ತಂದೆ ನಾಗೇಶ್ವರ ರಾವ್ ಲಾಕ್‌ಡೌನ್‌ ನಂತರ ಯಾವುದೇ ಕೆಲಸವಿಲ್ಲದೇ ತಮ್ಮ ಸ್ಥಳೀಯ ಗ್ರಾಮ ರಾಜುವರಿಪಲ್ಲಿಗೆ ಕೃಷಿ ಮಾಡಲು ಮರಳಿದ್ದರು.

ಆ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಅದಕ್ಕಾಗಿ ಆ ಕುಟುಂಬಕ್ಕೆ ಟ್ರಾಕ್ಟರ್ ನೀಡುತ್ತಿದ್ದೇನೆ ಎಂದು ಸೋನು ಸೂದ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ತದನಂತರ ತೆಲುಗು ದೇಶಂ ಪಕ್ಷದ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿ, ಸೋನು ಸೂದ್‌ರವರ ಸಹಾಯಕ್ಕಾಗಿ ಧನ್ಯವಾದಗಳು. ನಾನು ಆ ಇಬ್ಬರು ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿದ್ಯಾರ್ಥಿ ಮಾರ್ಗದರ್ಶಿ: ಪಿಯುಸಿ ನಂತರ ಮುಂದೇನು?: ಆಯ್ಕೆಗಳ ಬಗ್ಗೆ ಸ್ಪಷ್ಟತೆ ಇರಲಿ; ಗೊಂದಲ ಬೇಡ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...