Homeಕರೋನಾ ತಲ್ಲಣಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್‌ಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿ ದೊರೆತಿದೆ.

- Advertisement -
- Advertisement -

ಬಹುಭಾಷಾ ನಟ ಸೋನು ಸೂದ್ ಮುಂಬೈಯಲ್ಲಿ ತಮ್ಮ 8 ಆಸ್ತಿಗಳನ್ನು ಅಡವಿಟ್ಟಿದ್ದು, ಅಗತ್ಯವಿರುವವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸಿದ್ದಾರೆ ಎಂದು ಮನಿ ಕಂಟ್ರೋಲ್ ರಿಪೋರ್ಟ್ ವರದಿ ಮಾಡಿದೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದವರಿಗೆ ನಟ ಸಾಕಷ್ಟು ನೆರವು ನೀಡಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವಾದ ಸೋನು ಅವರ ಮಾನವೀಯ ಕಾರ್ಯವನ್ನು ದೇಶಾದ್ಯಂತದ ಕೋಟ್ಯಾಂತರ ಜನರು ಶ್ಲಾಘಿಸಿದ್ದಾರೆ. ಜೊತೆಗೆ ಈ ನಟ ತಾವು ಮಾಡುವ ಸಹಾಯವು ಹೆಚ್ಚು ಹೆಚ್ಚು ಜನರನ್ನು ತಲುಪುವಂತೆ ನೋಡಿಕೊಳ್ಳುತ್ತಿದ್ದಾರೆ.

ಸೋನು ಸೂದ್ ಮುಂಬೈನ ಜೂಹು ಪ್ರದೇಶದಲ್ಲಿರುವ ತಮ್ಮ 8 ಸ್ವತ್ತುಗಳನ್ನು ಅಡವಿಟ್ಟು 10 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂಬ ಬಗ್ಗೆ ಮನಿ ಕಂಟ್ರೋಲ್ ವೆಬ್​​​​ಸೈಟ್​​ನಲ್ಲಿ ದಾಖಲೆಗಳು ಬಹಿರಂಗವಾಗಿದೆ. 2 ಅಂಗಡಿಗಳು ಮತ್ತು 6 ಫ್ಲಾಟ್​ಗಳನ್ನು ಅಡವಿಟ್ಟಿದ್ದಾರೆ. ನವೆಂಬರ್ 24ರಂದು ಪತ್ನಿ ಹಾಗೂ ಮಕ್ಕಳ ಹೆಸರಿನಲ್ಲಿದ್ದ ಸ್ವತ್ತುಗಳನ್ನು ಅಡವಿಟ್ಟಿದ್ದಾರೆ. ಸೆಪ್ಟೆಂಬರ್ 15 ರಂದು ಈ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು ಮತ್ತು ನವೆಂಬರ್ 24 ರಂದು ಅಡವಿಟ್ಟು ನೋಂದಣಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಈ ಪ್ರೀಮಿಯಂ ಆಸ್ತಿಗಳು ನಟ ಮತ್ತು ಅವರ ಪತ್ನಿಯ ಒಡೆತನದಲ್ಲಿ ಮುಂದುವರಿಯುತ್ತದೆ. ಅವರು 10 ಕೋಟಿ ರೂ.ಗಳ ಸಾಲದ ಬಡ್ಡಿ ಮತ್ತು ಅಸಲು ಪಾವತಿಸಬೇಕಾಗುತ್ತದೆ” ಎಂದು ರೆಸಿಡೆನ್ಶಿಯಲ್ ಸರ್ವೀಸಸ್, ಜೆಎಲ್ಎಲ್ ಇಂಡಿಯಾದ ಹಿರಿಯ ನಿರ್ದೇಶಕ ರಿತೇಶ್ ಮೆಹ್ತಾ ಅವರು ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವೆಬ್ ಉಲ್ಲೇಖಿಸಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಟ ಸೋನು ಸೂದ್ ಅವರಿಂದ ಯಾವುದೇ ದೃಢಿಕರಣ ಸಿಕ್ಕಿಲ್ಲ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರತಿದಿನ ಸೋನು ಸೂದ್ ಅವರಿಗೆ ಸಹಾಯ ಕೇಳುವ ನೂರಾರು ಪತ್ರಗಳು ಬರುತ್ತಿದ್ದು, ಈ ಪತ್ರಗಳ ಚಿತ್ರವನ್ನು ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Sonu Sood (@sonu_sood)

“ನಾನು ಪ್ರತಿದಿನ ಸ್ವೀಕರಿಸುವ ಮೇಲ್‌ಗಳಿಗೆ ಸಹಾಯ ಮಾಡಿ. ಎಲ್ಲರನ್ನೂ ತಲುಪಲು ನಾನು ಬಯಸುತ್ತೇನೆ, ಆದರೆ, ಅದು ಅಸಾಧ್ಯವೆಂದು ತೋರುತ್ತದೆ. ಈ ಪತ್ರಗಳ ಸಂಖ್ಯೆ ಕಡಿಮೆಯಾಗುವ ದಿನಕ್ಕಾಗಿ ಕಾಯುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...