Homeಕರೋನಾ ತಲ್ಲಣಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್‌ಗೆ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿ ದೊರೆತಿದೆ.

- Advertisement -
- Advertisement -

ಬಹುಭಾಷಾ ನಟ ಸೋನು ಸೂದ್ ಮುಂಬೈಯಲ್ಲಿ ತಮ್ಮ 8 ಆಸ್ತಿಗಳನ್ನು ಅಡವಿಟ್ಟಿದ್ದು, ಅಗತ್ಯವಿರುವವರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸಿದ್ದಾರೆ ಎಂದು ಮನಿ ಕಂಟ್ರೋಲ್ ರಿಪೋರ್ಟ್ ವರದಿ ಮಾಡಿದೆ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದವರಿಗೆ ನಟ ಸಾಕಷ್ಟು ನೆರವು ನೀಡಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವಾದ ಸೋನು ಅವರ ಮಾನವೀಯ ಕಾರ್ಯವನ್ನು ದೇಶಾದ್ಯಂತದ ಕೋಟ್ಯಾಂತರ ಜನರು ಶ್ಲಾಘಿಸಿದ್ದಾರೆ. ಜೊತೆಗೆ ಈ ನಟ ತಾವು ಮಾಡುವ ಸಹಾಯವು ಹೆಚ್ಚು ಹೆಚ್ಚು ಜನರನ್ನು ತಲುಪುವಂತೆ ನೋಡಿಕೊಳ್ಳುತ್ತಿದ್ದಾರೆ.

ಸೋನು ಸೂದ್ ಮುಂಬೈನ ಜೂಹು ಪ್ರದೇಶದಲ್ಲಿರುವ ತಮ್ಮ 8 ಸ್ವತ್ತುಗಳನ್ನು ಅಡವಿಟ್ಟು 10 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂಬ ಬಗ್ಗೆ ಮನಿ ಕಂಟ್ರೋಲ್ ವೆಬ್​​​​ಸೈಟ್​​ನಲ್ಲಿ ದಾಖಲೆಗಳು ಬಹಿರಂಗವಾಗಿದೆ. 2 ಅಂಗಡಿಗಳು ಮತ್ತು 6 ಫ್ಲಾಟ್​ಗಳನ್ನು ಅಡವಿಟ್ಟಿದ್ದಾರೆ. ನವೆಂಬರ್ 24ರಂದು ಪತ್ನಿ ಹಾಗೂ ಮಕ್ಕಳ ಹೆಸರಿನಲ್ಲಿದ್ದ ಸ್ವತ್ತುಗಳನ್ನು ಅಡವಿಟ್ಟಿದ್ದಾರೆ. ಸೆಪ್ಟೆಂಬರ್ 15 ರಂದು ಈ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು ಮತ್ತು ನವೆಂಬರ್ 24 ರಂದು ಅಡವಿಟ್ಟು ನೋಂದಣಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಈ ಪ್ರೀಮಿಯಂ ಆಸ್ತಿಗಳು ನಟ ಮತ್ತು ಅವರ ಪತ್ನಿಯ ಒಡೆತನದಲ್ಲಿ ಮುಂದುವರಿಯುತ್ತದೆ. ಅವರು 10 ಕೋಟಿ ರೂ.ಗಳ ಸಾಲದ ಬಡ್ಡಿ ಮತ್ತು ಅಸಲು ಪಾವತಿಸಬೇಕಾಗುತ್ತದೆ” ಎಂದು ರೆಸಿಡೆನ್ಶಿಯಲ್ ಸರ್ವೀಸಸ್, ಜೆಎಲ್ಎಲ್ ಇಂಡಿಯಾದ ಹಿರಿಯ ನಿರ್ದೇಶಕ ರಿತೇಶ್ ಮೆಹ್ತಾ ಅವರು ಹೇಳಿದ್ದಾರೆ ಎಂದು ಮನಿ ಕಂಟ್ರೋಲ್ ವೆಬ್ ಉಲ್ಲೇಖಿಸಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ನಟ ಸೋನು ಸೂದ್ ಅವರಿಂದ ಯಾವುದೇ ದೃಢಿಕರಣ ಸಿಕ್ಕಿಲ್ಲ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ಸರ್ಕಾರ ಸಹಾಯಕ್ಕೆ ಬರದಿದ್ದರೂ, ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.

ಪ್ರತಿದಿನ ಸೋನು ಸೂದ್ ಅವರಿಗೆ ಸಹಾಯ ಕೇಳುವ ನೂರಾರು ಪತ್ರಗಳು ಬರುತ್ತಿದ್ದು, ಈ ಪತ್ರಗಳ ಚಿತ್ರವನ್ನು ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

 

View this post on Instagram

 

A post shared by Sonu Sood (@sonu_sood)

“ನಾನು ಪ್ರತಿದಿನ ಸ್ವೀಕರಿಸುವ ಮೇಲ್‌ಗಳಿಗೆ ಸಹಾಯ ಮಾಡಿ. ಎಲ್ಲರನ್ನೂ ತಲುಪಲು ನಾನು ಬಯಸುತ್ತೇನೆ, ಆದರೆ, ಅದು ಅಸಾಧ್ಯವೆಂದು ತೋರುತ್ತದೆ. ಈ ಪತ್ರಗಳ ಸಂಖ್ಯೆ ಕಡಿಮೆಯಾಗುವ ದಿನಕ್ಕಾಗಿ ಕಾಯುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...