Homeಮುಖಪುಟಪಂಜಾಬ್‌ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ ಸೋನು ಸೋದ್‌ ಸಹೋದರಿ

ಪಂಜಾಬ್‌ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ ಸೋನು ಸೋದ್‌ ಸಹೋದರಿ

ಇತ್ತೀಚೆಗಷ್ಟೆ ಸೋನು ಸೂದ್‌ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

- Advertisement -
- Advertisement -

ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಹೋದರಿ ಮಾಳವಿಕಾ ಸೂದ್‌ ಸ್ಪರ್ಧಿಸಲಿದ್ದಾರೆ ಎಂದು ನಟ ಸೋನು ಸೂದ್‌ ಭಾನುವಾರ ಘೋಷಿಸಿದ್ದಾರೆ.

ಪಂಜಾಬ್‌ನ ಮೊಗಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ಪಕ್ಷಗಳು ಟಿಕೆಟ್ ನೀಡಲು ಮುಂದಾಗಿವೆ. ಆದರೆ ಇನ್ನೂ ಯಾವ ಪಕ್ಷದಿಂದ ಸ್ಪರ್ಧಿಸಬೇಕೆಂಬ ಬಗ್ಗೆ ನಿರ್ಧರಿಸಿಲ್ಲ ಎಂದು ತಿಳಿಸಿದ್ದಾರೆ.

ಕೋವಿಡ್‌ ಬಿಕ್ಕಟ್ಟಿನ ಸಮಯದಲ್ಲಿ ಸೋನು ಸೂದ್‌ ಅವರು ಮಾಡಿದ್ದ ಸೇವೆ, ಸಾಮಾಜಿಕ ಕಾರ್ಯಗಳಿಗೆ ದೇಶಾದ್ಯಂತದ ಜನಸಾಮಾನ್ಯರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿತ್ತು.

ಸೋನು ಸೂದ್‌ ಅವರ ಕೆಲಸಗಳನ್ನು ರಾಜಕಾರಣಿಗಳು  ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಗೌರವಿಸಿದ್ದವು. ಈ ಕುರಿತು ಯಾವಾಗಲೂ ಮಾತನಾಡುತ್ತಿದ್ದ ಅವರು, ತಮ್ಮ ಸಾಮಾಜಿಕ ಕಾರ್ಯಗಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದರು.

ಇತ್ತೀಚೆಗಷ್ಟೆ ಸೋನು ಸೂದ್‌ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದರು.

ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದ ನಟ ಸೋನು ಸೂದ್‌ ಅವರನ್ನು, ಶಾಲಾ ವಿದ್ಯಾರ್ಥಿಗಳ ‘ದೇಶ್ ಕಾ ಮೆಂಟರ್ಸ್’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಎಂದು ಘೋಷಿಸಿದ್ದರು.

ಕೇಜ್ರಿವಾಲ್ ಅವರೊಂದಿಗಿನ ಭೇಟಿಯು ಬಹುಶಃ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆಯ ವದಂತಿಗಳನ್ನು ಹುಟ್ಟುಹಾಕಿತ್ತು.

‘ರಾಜಕೀಯದ ಬಗ್ಗೆ ಚರ್ಚಿಸಲಾಗಿಲ್ಲ. ಸದ್ಯಕ್ಕೆ ನಾನು ಯಾವುದೇ ರಾಜಕೀಯವನ್ನು ಚರ್ಚಿಸಿಲ್ಲ’ ಎಂದು ಸೋನು ಸೂದ್ ಆ ಸಮಯದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ 48 ವರ್ಷದ ನಟನ ಜನೋಪಕಾರವು ಅವರಿಗೆ ‘ವಲಸಿಗರ ಉದ್ದಾರಕ’ (ಮೆಸ್ಸಿಹ್‌ ಆಫ್‌ ಮೈಗ್ರೇಂಟ್ಸ್ಸ್) ಎಂಬ ಬಿರುದ್ದನ್ನು ಕೊಟ್ಟಿತ್ತು.

ಲಾಕ್‌ಡೌನ್‌ ಸಮಯದಲ್ಲಿ ಇಕ್ಕಟ್ಟಿಗೆ ಸಿಲುಕಿದ್ದ ಹಾಗೂ ಅಸಹಾಯಕರಾಗಿರುವ ನೂರಾರು ವಲಸಿಗರನ್ನು ಅವರ ಸ್ವಂತ ರಾಜ್ಯಕ್ಕೆ ಕರೆದೊಯ್ಯಲು ಸ್ವತಃ ಸೋನು ಸೂದ್ ಅವರೆ ಬಸ್‌, ರೈಲು ಮತ್ತು ವಿಮಾನಗಳ ವ್ಯವಸ್ಥೆ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆಯ ಸಮಯದಲ್ಲಿ, ಅವರು ಕೋವಿಡ್ ರೋಗಿಗಳಿಗೆ ಆಕ್ಸಿಜೆನ್‌ ಸಿಲೆಂಡರ್‌ಗಳನ್ನು ಒದಗಿಸಿದ್ದರು. ಒಟ್ಟಾರೆಯಾಗಿ ಸರ್ಕಾರಗಳು ಮಾಡಬೇಕಾದ ಕೆಲಸವನ್ನು ಸೋನು ಸೂದ್ ಮಾಡಿ ಜನಮನ್ನಣೆ ಗಳಿಸಿದ್ದರು.

ಕಳೆದ ಸೆಪ್ಟಂಬರ್ ತಿಂಗಳನಲ್ಲಿ ಮುಂಬೈನಲ್ಲಿರುವ ಸೂನು ಸೂದ್‌ ಅವರ ನಿವಾಸ ಹಾಗೂ ಲಕ್ನೋದಲ್ಲಿನ ಸೋನು ಸೂದ್‌ ಅವರ ಹಲವು ಸಂಸ್ಥೆಗಳ ಮೇಲೆ ಐಟಿ ಕಾರ್ಯಾಚರಣೆ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೂನು ಸೂದ್‌, “ನೀವು ಯಾವಾಗಲೂ ನಿಮ್ಮ ಕಡೆಯ ಕತೆ ಹೇಳಬೇಕಾಗಿಲ್ಲ. ಅದಕ್ಕೊಂದು ಸಮಯ ಬರುತ್ತದೆ. ನನ್ನ ಫೌಂಡೇಷನ್‌‌‌ನ ಪ್ರತಿ ರೂಪಾಯಿಯು ಅಮೂಲ್ಯವಾದ ಜೀವವನ್ನು ಉಳಿಸಲು ಮತ್ತು ಅಗತ್ಯವಿರುವವರಿಗೆ ತಲುಪಲು ತನ್ನ ಸರದಿಗಾಗಿ ಕಾಯುತ್ತಿದೆ. ಕಾಲವೇ ಉತ್ತರಿಸುತ್ತದೆ” ಎಂದಿದ್ದರು.

‘ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ, ರಾಜಕೀಯಕ್ಕೆ ಸೇರಲು ಮಾನಸಿಕವಾಗಿ ಸಿದ್ಧವಾಗಿಲ್ಲ ಎಂದು ಎನ್‌ಡಿಟಿವಿ ನಡೆಸಿದ ಸಂದರ್ಭದಲ್ಲಿ ಅವರು ತಿಳಿಸಿದ್ದರು.

ಈಗ ಅವರ ಸಹೋದರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನು ರಾಜಕೀಯ ಪಕ್ಷಗಳು ಮತ್ತು ಜನಸಾಮಾನ್ಯರು ಯಾವ ರೀತಿ ಸ್ವೀಕರಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನು 2 ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ’- ನಟ ಸೋನು ಸೂದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...