Homeಮುಖಪುಟಶೀಘ್ರವೆ ರಾಜ್ಯತ್ವ ಮರುಸ್ಥಾಪನೆಯ ಭರವಸೆಯಿದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

ಶೀಘ್ರವೆ ರಾಜ್ಯತ್ವ ಮರುಸ್ಥಾಪನೆಯ ಭರವಸೆಯಿದೆ: ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕ ಹಂತವಾಗಿದ್ದು, ಅದರ ರಾಜ್ಯತ್ವವನ್ನು ಮರುಸ್ಥಾಪಿಸುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸುತ್ತದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಭರವಸೆ ವ್ಯಕ್ತಪಡಿಸಿದ್ದಾರೆ. ಶೀಘ್ರವೆ ರಾಜ್ಯತ್ವ

“ನಾವು ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಕೇಂದ್ರಾಡಳಿತ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಮಯ ಹಿಡಿಯಿತು. ನಾವು ಈ ಹಿಂದೆ ಕೂಡಾ ಸರ್ಕಾರ ರಚನೆ ಮಾಡಿದ್ದೇವೆ. ಆದರೆ ಅದಕ್ಕೂ ಪ್ರಸ್ತುತ ಕೇಂದ್ರಾಡಳಿತದ ಸ್ವರೂಪಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ಎಂದು ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಶೀಘ್ರವೆ ರಾಜ್ಯತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ನಮ್ಮ ಚುನಾವಣಾ ಭರವಸೆಗಳಿಗೆ ಬದ್ಧರಾಗಿದ್ದೇವೆ. ಕೆಲವು ಭರವಸೆಗಳನ್ನು ಜಾರಿಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಜೊತೆಗೆ ಇತರ ಭರವಸೆಗಳ ಈಡೇರಿಕೆಗಳಿಗಾಗಿ ನಮಗೆ ವ್ಯವಸ್ಥೆಯಲ್ಲಿ ಬದಲಾವಣೆಯ ಅಗತ್ಯವಿದೆ. ಜಮ್ಮು ಕಾಶ್ಮೀರ ಕೇಂದ್ರಾಡಳಿತ ಆಗಿರುವುದು ತಾತ್ಕಾಲಿಕ ಹಂತ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ನಾವು ಈಗ ನೀಡಿದ ಭರವಸೆಗಳನ್ನು ಈಡೇರಿಸಬಹುದೆಂಬ ನಿರೀಕ್ಷೆಯಲ್ಲಿದ್ದೇವೆ. ರಾಜ್ಯದ ಸ್ಥಾನಮಾನದ ಮರುಸ್ಥಾಪನೆ ನಮ್ಮ ಅತಿದೊಡ್ಡ ಭರವಸೆಯಾಗಿದೆ. ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ರಾಜ್ಯ ಸ್ಥಾನಮಾನವನ್ನು ಆದಷ್ಟು ಬೇಗ ಮರುಸ್ಥಾಪಿಸಬೇಕು ಎಂದು ಹೇಳಿದೆ. ಅಂದಿನಿಂದ ಒಂದು ವರ್ಷ ಕಳೆದಿದೆ, ಹಾಗಾಗಿ ಈ ಒಂದು ವರ್ಷ ಅದಕ್ಕೆ ಸಾಕಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಜನರ ಭಾವನೆಗಳನ್ನು ಗೌರವಿಸಬೇಕು ಅವರ ಆಶಯಗಳನ್ನು ಈಡೇರಿಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಇದು ಸಂವಾದವೇ ಹೊರತು, ಪತ್ರಿಕಾಗೋಷ್ಠಿಯಲ್ಲ ಎಂದು ಹೇಳಿದ್ದಾರೆ.

“ಸಾಮಾಜಿಕ ಮಾಧ್ಯಮದ ಊಹಾಪೋಹದಂತೆ ನಾವು ಯಾವುದೇ ದೊಡ್ಡ ಘೋಷಣೆಗಳನ್ನು ಮಾಡುತ್ತಿಲ್ಲ. ನಾವು ಕೇವಲ ಸಂವಾದವನ್ನು ಹೊಂದಲು ಬಯಸಿದ್ದು, ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲು ನಾವು ಪ್ರಯತ್ನಿಸುತ್ತೇವೆ. ವರ್ಷಕ್ಕೆ ಎರಡು ಬಾರಿ ಯಾವುದೇ ಅಜೆಂಡಾ ಇಲ್ಲದೆ ಈ ರೀತಿಯ ಸಂವಾದವನ್ನು ಹೊಂದಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

ಕಾನೂನು ಬಾಹಿರವಾಗಿ ಪತ್ರಕರ್ತನ ಮನೆ ಕೆಡವಿದ ಪ್ರಕರಣ : ಮಾಜಿ ಜಿಲ್ಲಾಧಿಕಾರಿ ಸೇರಿ 26 ಮಂದಿಯ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...